ಬಿಸಿ ಬಿಸಿ ಸುದ್ದಿ

ಕಣ್ಣು ಮಣ್ಣಾಗದಿರಲಿ ಬೇರೊಬ್ಬರ ಬಾಳಿಗೆ ಹೊನ್ನಾಗಲಿ : ಪಾಟೀಲ್

ಶಹಾಪುರ: ನಮ್ಮದೊಂದು ಅಸ್ತಿತ್ವ ಜಗತ್ತಿನ ಜೀವಿಗಳಲ್ಲಿ ಇರುವುದಾದರೆ ಅದು ಕಣ್ಣು ಮಾತ್ರ ಹೀಗಾಗಿ ಕಣ್ಣನ್ನು ಮಣ್ಣಾಗಲು ಬಿಡದೆ ಬೇರೊಬ್ಬರ ಜೀವನಕ್ಕೆ ಹೊನ್ನಾಗುವಂತೆ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ನಂದಣ್ಣ ಪಾಟೀಲ್ ಹೇಳಿದರು.

ತಾಲ್ಲೂಕಿನ ವನದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 35 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ ಅಂಗವಾಗಿ ಆಯೋಜಿಸಿರುವ ನೇತ್ರದಾನ ಮಹಾದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ನಮ್ಮ ದೇಶದಲ್ಲಿ ಇಂದಿಗೂ ಒಂದು ಅಂದಾಜಿನ ಪ್ರಕಾರ 50 ಲಕ್ಷಕ್ಕೂ ಅಧಿಕ ಪುರುಷರು,ಮಹಿಳೆಯರು ಹಾಗೂ ಮಕ್ಕಳು ಅಂಧರಾಗಿ ಜೀವನ ನಡೆಸುತ್ತಿದ್ದಾರೆ ಇವರೆಲ್ಲರೂ ಯಾವತ್ತೂ ಸೂರ್ಯನ ಕಿರಣಗಳನ್ನು ಕಂಡಿಲ್ಲ,ಪೂರ್ಣ ಹುಣ್ಣಿಮೆ ಚಂದ್ರನ ಸವಿ ಸವಿದಿಲ್ಲ, ಇಂಥವರಿಗೆ ಸಹಾಯ ಮಾಡುವ ಮನಸ್ಸು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ನೇತ್ರದಾನ ಮಾಡುವವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಈ ನಿಟ್ಟಿನಲ್ಲಿ ಸಮಾಜದ ಸಂಘ ಸಂಸ್ಥೆಗಳು ಪ್ರಜ್ಞಾವಂತರು ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಆರೋಗ್ಯ ಮೇಲ್ವಿಚಾರಕರಾದ ರಾಘವೇಂದ್ರ ಕುಲಕರ್ಣಿ ಮಾತನಾಡಿ ನೇತ್ರದಾನ ಎಂದರೆ ಕೆಲವರು ಇಡೀ ಕಣ್ಣನ್ನೇ ತೆಗೆಯುತ್ತಾರೆ ಎಂದು ತಿಳಿದಿರುತ್ತಾರೆ,ಆದರೆ ಅದು ತಪ್ಪು ಕಲ್ಪನೆ ಕಣ್ಣಿನ ಒಂದು ಪದರನ್ನು ಮಾತ್ರ ತೆಗೆಯಲಾಗುತ್ತದೆ,ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆವಿದೆ ಕೆಲವರು ನೇತ್ರದಾನ ಮಾಡಿದ್ದರೂ ಕೂಡ ಮರಣ ಸಂಭವಿಸಿದಾಗ ಅವರ ಕುಟುಂಬದವರು ನಮಗೆ ಮಾಹಿತಿಯನ್ನು ನೀಡುವುದಿಲ್ಲ ಹಾಗೆಂದ ಮಾತ್ರಕ್ಕೆ ಅವರಿಗೆ ನೇತ್ರದಾನ ಇಷ್ಟವಿಲ್ಲ ಎಂದಲ್ಲ ಆದರೆ ಕಣ್ಣನ್ನು ಕಿತ್ತು ಬಿಟ್ಟರೆ ಅಂತಿಮ ಕ್ಷಣದಲ್ಲಿ ಅವರ ವಿರೂಪ ಮುಖವನ್ನು ನೋಡಲು ಸಾಧ್ಯವಿಲ್ಲ ಎಂಬ ಭಾವನಾತ್ಮಕ ಆಲೋಚನೆಯೂ ಅವರಲ್ಲಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ಸಹಾಯಕರಾದ ಮಲ್ಲೇಶ್ ಕುರಕುಂದಿ,ನೇತ್ರ ಸಹಾಯಕ ಬಸವರಾಜ್, ವಿಶ್ವರಾಧ್ಯ ಬೆಳ್ಳೂರು, ಷಣ್ಮುಖಪ್ಪ ಹೊಸಳ್ಳಿ,ದೇವಕ್ಕಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago