ಶಹಾಬಾದ:ಬಿಜಾಪೂರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಮಾದಿಗ ದಲಿತ ಯುವ ಮುಖಂಡ ಅನೀಲ ಇಂಗಳಗಿ ಅವರ ಹತ್ಯೆ ಮಾಡಿರುವವರನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬುಧವಾರ ದಲಿತ ಮಾದಿಗ ಸಮನ್ವಯ ಸಮಿತಿಯಿಂದ ತಹಸೀಲ್ದಾರ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ದಲಿತ ಮಾದಿಗ ಸಮನ್ವಯ ಸಮಿತಿ ಅಧ್ಯಕ್ಷ ಶಿವರಾಜ ಕೋರೆ ಮಾತನಾಡಿ, ರಾಜಾರೋಷವಾಗಿ ಹಾಡುಹಗಲೇ ಅನೀಲ ಇಂಗಳಗಿ ಕೊಲೆ ನಡೆದಿರುವುದು ನೋಡಿದರೇ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿರುವುದು ಕಂಡು ಬರುತ್ತದೆ.ಈಗಾಗಲೇ ದಲಿತ ಸಮುದಾಯದ ಅನೇಕ ಯುವಕರ ಬರ್ಬರ ಹತ್ಯೆ ನಡೆದಿದೆ.ಈ ಬಗ್ಗೆ ಕ್ರಮಕೈಗೊಳ್ಳಬೇಕಾದ ಪೊಲೀಸ್ ಇಲಾಖೆ ವಿಫಲವಾಗಿದೆ. ಕೂಡಲೇ ಅನೀಲ ಇಂಗಳಗಿ ಕೊಲೆ ಮಾಡಿದ ಸಿದ್ದು ಬಿರಾದಾರ ಹಾಗೂ ಇನ್ನೀತರ ವ್ಯಕ್ತಿಗಳನ್ನು ಬಂಧಿಸಬೇಕು. ಅವರ ಕುಟುಂಬಕ್ಕೆ ರಕ್ಷಣೆ ನೀಡುವುದರ ಮೂಲಕ ಪರಹಾರ ಒದಗಿಸಬೇಕೆಂದು ಆಗ್ರಹಿಸಿದರು.ಅಲ್ಲದೇ ಹತ್ಯೆಯಾದ ಅನೀಲ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ 5 ಎಕರೆ ಜಮೀನನ್ನು ಮಂಜೂರು ಮಾಡಬೇಕು. ಇನ್ನೊಮ್ಮೆ ಈ ರೀತಯ ಘಟನೆಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಬೇಕು.ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಗೃಹ ಸಚಿವರಿಗೆ ಒತ್ತಾಯಿಸಿದರು.
ನಂತರ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.ದಲಿತ ಮಾದಿಗ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶರಣು.ಬಿ.ಪಗಲಾಪೂರ, ಪ್ರಧಾನ ಕಾರ್ಯದರ್ಶಿ ರವಿ ಬೆಳಮಗಿ, ನಾಗರಾಜ ಮುದ್ನಾಳ, ಲಕ್ಷ್ಮಣ ಹೈಯ್ಯಾಳಕರ್, ಎಂ.ಆರ್.ದೊಡ್ಡಮನಿ, ಮರೆಪ್ಪ ಹೊನಗುಂಟಾ,ಸಿದ್ರಾಮ ಗಾಯಕವಾಡ, ನಾಗರಾಜ ರಾಯಚೂರಕರ್, ಸಿದ್ದು ಪಸಪುಲ ಇತರರು ಇದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…