ವಾಡಿ: ಪಟ್ಟಣದಲ್ಲಿ ಮೋಹರಂ ಆಚರಣೆ ನಿಮಿತ್ತ ಗುರುವಾರ ಕೌಡಿ ಪೀರ್ ದೇವರುಗಳ ಮೆರವಣಿಗೆ ನಡೆಯಿತು.
ಮರಾಠಿ ಗಲ್ಲಿಯ ಗೌಳಿ ವಾಡೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕೌಡಿ ಪೀರ್ ದೇವರಿಗೆ ವಿಶೇಷ ಪೂಜೆಗಳು ನಡೆದವು. ಭಕ್ತರು ಅಗ್ನಿ ತುಳಿದು ಹರಕೆ ತೀರಿಸಿದರು. ಕೋವಿಡ್ ನಿಮಿತ್ತ ವಿವಿಧ ಧಾರ್ಮಿಕ ಆಚರಣೆಗಳನ್ನು ರದ್ಧುಪಡಿಸುವ ಮೂಲಕ ಸರಳ ರೀತಿಯಲ್ಲಿ ಮೋಹರಂ ಆಚರಣೆ ಮಾಡಲಾಯಿತು. ಬುಧವಾರ ಸಂಜೆ ದೇವರ ಮುಂದೆ ಬೆಂಕಿ ಉರಿಸಿ ಧಾರ್ಮಿಕ ಆಚರಣೆ ಪೂರ್ಣಗೊಳಿಸಿದರೆ, ಗುರುವಾರ ಸಂಜೆ ಕಡಿಮೆ ಸಂಖ್ಯೆಯ ಭಕ್ತರ ಮಧ್ಯೆ ಕೌಡಿ ಪೀರಾಗಳ ಮೆರವಣಿಗೆ ನಡೆದು ದಫನ್ ನೆರವೇರಿಸಲಾಯಿತು.
ಮುಖಂಡರಾದ ಶೇಖ ಅಫ್ಜಲ್, ಶೇಖ ಸಮೀರ್, ಶೇಖ ಅಕ್ರಂ, ಶೇಖ ಜಾಫರ್, ಶೇಖ ಹುಸೇನ್, ಶೇಖ ತುನ್ನು, ಶೇಖ ಹಾಜಿಸರ್ವರ್ ಸೇರಿದಂತೆ ಬಡಾವಣೆಯ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…