ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ!! ಸಂಸದ ಜಾಧವ್ ತಿರುಗೇಟು

0
166

ಕಲಬುರಗಿ: ರಾಜ್ಯದಲ್ಲಿ ಗಾಂಜಾ ಪ್ರಕರಣಗಳು ಭಾರಿ ಸದ್ದು ಮಾಡುತ್ತಿದ್ದು, ಈಗಾಗಲೇ ನಟಿ ರಾಗಿಣಿ ಸೇರಿದಂತೆ ಹಲವರನ್ನು ಬೆಂಗಳೂರು ಪೊಲೀಸರು ವಿಚಾರಣೆ ನಡೆಸಿ ತನಿಖೆ ನಡೆಸುತ್ತಿದ್ದು, ನಿನ್ನೆಯಷ್ಟೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಸುದ್ದಿಗೋಷ್ಟಿ ನಡೆಸಿ 1350 ಗಾಂಜಾ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕುರಿತು ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.

ಸದ್ಯ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಜಿಲ್ಲೆಯಲ್ಲಿ ಕುರಿ ಫಾರ್ಮ್ ನಲ್ಲಿ ಸಿಕ್ಕಿರುವ ಗಾಂಜಾ ಮೊಟ್ಟೆಯ ಪ್ರಕರಣದ ಪ್ರಮುಖ ಬಂಧಿತ ಆರೋಪಿ ಕಲಬುರಗಿ ಜಿಲ್ಲೆಯ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ.

Contact Your\'s Advertisement; 9902492681

ಆರೋಪಿ ಚಂದ್ರಕಾಂತ ಬಿಜೆಪಿಯ ಇತರೆ ಕಾರ್ಯಕರ್ತರೊಂದಿಗೆ ತೆಗೆದುಕೊಂಡಿರುವ ಫೋಟೋವನ್ನು ಮಾಜಿ ಸಚಿವ, ಶಾಸಕರಾದ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.

“ಬಿಜೆಪಿಯವರೇ ನಿಮ್ಮದೇ ಸರ್ಕಾರವಿದೆ. ನಿಮ್ಮ ಬಳಿ ಎಲ್ಲ ಸಂಪನ್ಮೂಲಗಳು ಇವೆ. ಅವುಗಳನ್ನು ಉಪಯೋಗಿಸಿಕೊಂಡು ಕಲಬುರಗಿಯಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ಜೂಜು ಅಡ್ಡೆಗಳನ್ನು ಕಂಡುಹಿಡಿಯಿರಿ. ಈ ರೀತಿಯ ಕ್ಲಬ್ಗಳನ್ನು ನಡೆಸಲು ಯಾರೂ ಅನುಮತಿ ಕೊಟ್ಟಿದ್ದಾರೆ ಎಂಬುದನ್ನು ಕಂಡುಹಿಡಿಯಿರಿ. ಯಾವು ರಾಜಕೀಯ ನಾಯಕ ರಕ್ಷಣೆಯಿಂದ ಇವರು ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ” ಎಂದು ಸಾಮಾಜಿಕ ಜಾಲಾತಾಣ ಮತ್ತೊಂದು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.

ಸಂಸದ ಜಾಧವ್ ತಿರುಗೇಟು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯ ವಿರುದ್ದ ಸಂಸದ ಡಾ. ಉಮೇಶ್ ಜಾಧವ್ ಪ್ರತಿಕ್ರಿಯೆ ನೀಡಿ, ಗಾಂಜಾ ಏಮಬ ಸಾಮಾಜಿಕ ಪಿಡುಗನ್ನು ಎಲ್ಲರೂ ಸೇರಿ ತೆಗೆದುಹಾಕಬೇಕು, ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ತಿರುಗೇಟ್ಟು ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here