ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಮೇಶ ಭಟ್, ಪ್ರ.ಕಾರ್ಯದರ್ಶಿಯಾಗಿ ವಾಸುದೇವ ಚವ್ಹಾಣ ಆಯ್ಕೆ

0
41

ಶಹಾಬಾದ:ತಾಲೂಕಿನ ಕರ್ನಾಟಕ ರಾಜ್ಯ ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಕೆ.ರಮೇಶ ಭಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ವಾಸುದೇವ ಚವ್ಹಾಣ ಅವರನ್ನು ಆಯ್ಕೆ ಮಾಡಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ ಅಧ್ಯಕ್ಷ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು. ನಂತರ ಅವರನ್ನು ಜಿಲ್ಲಾ ಸಂಘದ ವತಿಯಿಂದ ಸನ್ಮಾನಿಸಿದರು.
ರಾಜ್ಯ ಸಮಿತಿ ಸದಸ್ಯರಾದ ದೇವೆಂದ್ರಪ್ಪ ಕಪನೂರ, ಜಿಲ್ಲಾ ಖಜಾಂಚಿ, ರಾಜು ದೇಶಮುಖ, ಗ್ರಾಮೀಣ ಉಪಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ಮಹೇಶ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here