ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿನ ಒಟ್ಟು 1068 ಹಂದಿಗಳ ಸ್ಥಳಾಂತರ

ಕಲಬುರಗಿ: ನಗರದ ವಿವಿಧ ಬಡಾವಣೆಗಳಲ್ಲಿ ಅನಧೀಕೃತವಾಗಿ ಸಾಕುತ್ತಿರುವ ಹಂದಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಇತ್ತೀಚೆಗೆ ಮಾಲೀಕರೊಂದಿಗೆ ಸಭೆ ಕರೆದು ಕಟ್ಟು ನಿಟ್ಟಿನ ಸೂಚನೆ ನೀಡಿ, ಐದು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೂ ಕೂಡ ಹಂದಿ ಮಾಲೀಕರು ಪಾಲಿಕೆಯ ಆಯುಕ್ತರ ನಿರ್ದೇಶನ ಪಾಲನೆ ಮಾಡದೇ ಯಥಾಸ್ಥಿತಿಯಲ್ಲಿ ತಮ್ಮ ಕಾರ್ಯಚಟುವಟಿಕೆಯನ್ನು ಮುಂದುವರಿಸಿರುತ್ತಾರೆ. ಇದರ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಹಿರಿಯ ಪಶುವೈದ್ಯಾಧಿಕಾರಿ ಡಾ. ಮುಹಮ್ಮದ ಸಖಾವತ್ ಹುಸೇನ್ ಮತ್ತು ತಂಡದ ನೇತೃತ್ವ ಹಾಗೂ ನಗರದ ಕೆಲವು ಹಂದಿ ಮಾಲೀಕರ ಸಹಯೋಗದೊಂದಿಗೆ 2020ರ ಸೆಪ್ಟೆಂಬರ್ 9 ರಿಂದ 11 ರವರೆಗೆ ಮೂರು ದಿನಗಳ ಕಾಲ ವಿವಿಧ ಬಡಾವಣೆಗಳಲ್ಲಿನ ಒಟ್ಟು 1068 ಹಂದಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 9 ರಂದು ನಗರದ ಮೌಲಾ ಅಲಿ ಕಟ್ಟಾ ಎಂ.ಎಸ್.ಕೆ.ಮಿಲ್‍ನಲ್ಲಿ 93 ಹಂದಿಗಳು ಹಾಗೂ ಎಂ.ಜಿ.ರೋಡ ಬಸವೇಶ್ವರ ಕಾಲೋನಿಯಲ್ಲಿ 62 ಸೇರಿದಂತೆ ಒಟ್ಟು 155 ಹಂದಿಗಳನ್ನು ಸ್ಥಳಾಂತರಿಸಲಾಗಿರುತ್ತದೆ.

ಸೆಪ್ಟೆಂಬರ್ 10ರಂದು ಮೌಲಾ ಅಲಿ ಕಟ್ಟಾದಲ್ಲಿ ಉಳಿದ 59 ಹಂದಿ, ಖದೀರ ಚೌಕ್‍ದಲ್ಲಿ 75, ಕೋಲ್ಡ್ ಸ್ಟೋರೇಜ್ ಮತ್ತು ಮಹಾನಗರ ಪಾಲಿಕೆಯ ನೈರ್ಮಲ್ಯ ನಿರೀಕ್ಷಕರ ಕಚೇರಿ ಹಿಂದುಗಡೆಯಲ್ಲಿ 103, ಬಸವ ನಗರ 43, ತಾರಪೈಲ್‍ದಲ್ಲಿನ 184 ಮತ್ತು ಪಂಚಶೀಲ ನಗರದಲ್ಲಿ 160 ಸೇರಿದಂತೆ ಒಟ್ಟು 624 ಹಂದಿಗಳನ್ನು ಹಿಡಿದು ಸ್ಥಳಾಂತರಿಸಲಾಗಿದೆ.

ಸೆಪ್ಟೆಂಬರ್ 11 ರಂದು ಸ್ವಸ್ತಿಕ್ ನಗರದಲ್ಲಿ 89, ಗುಬ್ಬಿ ಕಾಲೋನಿಯಲ್ಲಿ 70, ಉಮರ ಕಾಲೋನಿ 46, ಬಸವ ನಗರದಲ್ಲಿ 28 ಹಾಗೂ ಕೋರಂಟಿ ಹನುಮಾನ ಟೆಂಪಲ್ ತಾಂಡದ ಸಮೀಪ 56 ಸೇರಿದಂತೆ ಒಟ್ಟು 289 ಹಂದಿಗಳನ್ನು ಸ್ಥಳಾಂತರಿಸಲಾಗಿದೆ.

ಕಲಬುರಗಿ ಮಹಾನಗರದ ವಿವಿಧ ಬಡಾವಣೆಗಳಲ್ಲಿ ಹಂದಿಗಳ ಹಾವಳಿ ಮತ್ತು ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿದಿನ ಮಹಾನಗರ ಪಾಲಿಕೆಗೆ ಹಲವಾರು ದೂರುಗಳು ಬಂದಿವೆ. ನಗರದ ವಿವಿಧ ವಾರ್ಡಗಳಲ್ಲಿ ಅನಧಿಕೃತವಾಗಿ ಹಂದಿ ಸಾಕಾಣಿಕೆ ಮಾಡುವ ಮಾಲೀಕರಿಗೆ ಲಿಖಿತವಾಗಿ ಈಗಾಗಲೇ ಹಲವಾರು ಬಾರಿ ನೋಟೀಸ್ ಜಾರಿ ಮಾಡಿ ತಾವಾಗಿಯೇ ಹಂದಿಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಸೂಚಿಸಲಾಗಿತ್ತು.

ಕಲಬುರಗಿ ನಗರದಲ್ಲಿ ಹಂದಿಗಳ ಹಾವಳಿ/ಉಪಟಳ ನಿಯಂತ್ರಣಕ್ಕಾಗಿ ಮಹಾನಗರ ಪಾಲಿಕೆಯ ಹಿರಿಯ ಪಶು ವೈದ್ಯಾಧಿಕಾರಿಯವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿಯೂ ಸಹ ಕಾರ್ಯಾಚರಣೆ ಕೈಗೊಂಡು ಹಂದಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲು ರೂಪರೇಷೆಗಳನ್ನು ಸಿಧ್ಧಪಡಿಸಲಾಗಿದೆ. ನಗರದ ವಿವಿಧ ಬಡಾವಣೆಯಲ್ಲಿ ಹಂದಿ ಮಾಲೀಕರಿಗೆ ತಮ್ಮ ಹಂದಿಗಳನ್ನು 2020ರ ಸೆಪ್ಟೆಂಬರ್ 14 ರವರೆಗೆ ನಗರದಿಂದ ಹೊರಗಡೆ ಸ್ಥಳಾಂತರಿಸಲು ಧ್ವನಿ ವರ್ಧಕ ಮೂಲಕ ಪ್ರಚಾರ ಮಾಡಿ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿ ನಗರದ ಸಾರ್ವಜನಿಕರು ತಮ್ಮ ಮನೆಯಲ್ಲಿ ಉಳಿದಿರುವ ಆಹಾರದ ಹಸಿ ಕಸವನ್ನು (ಮುಸರಿ ಪದಾಥರ್Àಗಳು) ಸಾರ್ವಜನಿಕ ಅಥವಾ ಖುಲ್ಲಾ ನಿವೇಶನದಲ್ಲಿ ಹಾಕಬಾರದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ಕಲಬುರಗಿ ನಗರದ ಸಾರ್ವಜಕರಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420