ಶಹಾಪುರ: ತಾಲೂಕಿನ ಶಿರವಾಳ ಗ್ರಾಮದಲ್ಲಿ ಜೀ ಕನ್ನಡ ಮುಖಾಂತರ ಪ್ರಸಾರವಾಗುತ್ತಿರುವ ಮಹಾನ್ ನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣವನ್ನು ನಗರಸಭೆ ಸದಸ್ಯರಾದ ಶಿವಕುಮಾರ್ ತಳವಾರ್ ಅವರು ಹಾಗೂ ಯುವ ಮುಖಂಡರಾದ ನಿಜಗುಣ ದೋರನಹಳ್ಳಿ ಅವರು ನೆರವೇರಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಡಾ. ಬಿಆರ್ ಅಂಬೇಡ್ಕರ್ ಅವರು ಕೇವಲ ಒಂದು ವರ್ಗಕ್ಕೆ ಸೀಮಿತ ಆದವರಲ್ಲ ಇಡೀ ದೇಶದ ಪ್ರತಿಯೊಬ್ಬ ಪ್ರಜೆಗೂ ಕೂಡ ಅಂಬೇಡ್ಕರವರ ಸ್ಫೂರ್ತಿ ಎಂದು ಶಿವಕುಮಾರ್ ತಳವಾರ್ ಅವರು ತಿಳಿಸಿದರು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ನಾವು ನೀವು ಎಲ್ಲರೂ ಕೂಡ ಧಾರವಾಹಿ ಮುಖಾಂತರ ನೋಡಿ ನಾವೆಲ್ಲರೂ ಅವರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಶಿವಕುಮಾರ್ ಅವರು ತಿಳಿಸಿದರು.
ನಿಜಗುಣ ದೋರನಹಳ್ಳಿ ಅವರು ಮಾತನಾಡಿ ಡಾ. ಅಂಬೇಡ್ಕರ್ ಅವರು ಬರೆದಿರುವಂತಹ ಸಂವಿಧಾನ ಕೇವಲ ಒಂದು ವರ್ಗಕ್ಕೆ ಸೀಮಿತವಾದವರಲ್ಲಾ ಈ ದೇಶದ ಪ್ರತಿಯೊಬ್ಬ ನಾಗರಿಕರಿಗೆ ರಾಜಕೀಯವಾಗಿ ಶೈಕ್ಷಣಿಕವಾಗಿ ಎಲ್ಲಾ ರಂಗದ ಅವಕಾಶಗಳನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ ಎಂದು ನಿಜಗುಣ ದೋರನಹಳ್ಳಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರಾಮಣ್ಣ ಸದ್ಯಾಪೂರ್, ಮರೆಪ್ಪ ಜಾಲಿಮಂಚಿ, ಭೀಮರಾಯ ಜುನ್ನಾ, ಶಿವು ಆಂದೋಲಾ, ರಾಯಪ್ಪ ಸಾಲಿಮನಿ, ಬಲಬೀಮ ನಡವಿನಕೆರಿ, ಶಿವಪ್ಪ ಮಕ್ತಾಪೂರ, ಮರೆಪ್ಪ ಬಂಡಾರಿ ಹಾಗೂ ಗ್ರಾಮದ ಅನೇಕ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…