ಕಲಬುರಗಿ: ನಗರದ ಶರಣಬಸವ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಎಂ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ವನ್ನು ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥರಾದ ಟಿ.ವಿ.ಶಿವಾನಂದ್ ರವರು ವಹಿಸಿ ಮಾತನಾಡಿದ್ದರು.
ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀಮತಿ ಅಶ್ವಿನಿ ರೆಡ್ಡಿ, ಡಾ.ಸುನಿತಾ ಪಾಟೀಲ್, ಶ್ರೀಮತಿ ನಿರ್ಮಲಾ ದೊರೆ, ಪತ್ರಕರ್ತ ಸುಭಾಷ್ ಬಣಗಾರ, ಅನಿತಾ ಗಾಯಕ್ವಾಡ್, ವೇದಿಕೆ ಮೇಲಿದ್ದರು.
ಕಾರ್ಯಕ್ರಮವು ಪ್ರಾರ್ಥನಾ ಗೀತೆ ಯೊಂದಿಗೆ ಪ್ರಾರಂಭವಾಯಿತು. ವಿದ್ಯಾರ್ಥಿ ಶಿವಲಿಂಗ ಹಾಡಿದ್ದರು. ಸ್ವಾಗತ ಭಾಷಣವನ್ನು ಭೀಮಾಶಂಕರ್ ಪಾಣೇಗಾಂವ್ ಮಾಡಿದರು. ನಿರೂಪಣೆಯನ್ನು ಕಾಶಿಬಾಯಿ ಗುತ್ತೇದಾರ, ಪ್ರದೀಪ್ ಜಮಾದಾರ್ ವಹಿಸಿದ್ದರು.ನಿಂಗಣ್ಣ ಜಂಬಗಿ ಪ್ರಾಸ್ತಾವಿಕ ನುಡಿ ಮಾತಾನಾಡಿದರು. ವಂದನಾರ್ಪಣೆಯನ್ನು ರಾಜಶೇಖರ್ ಮಾತೋಳಿ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಫೋಟೋ ಜರ್ನಲಿಸ್ಟ್ ಅಶೋಕ್ ಪಾಟೀಲ್, ಬಸವರಾಜ್, ರಾಘು ಕುಲಕರ್ಣಿ ಹಾಜರಿದ್ದರು. ಈ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸಿದ್ದಮ್ಮ ಜಮಾದಾರ್, ದಸ್ತಗಿರ್ ನದಾಫ, ಜಯಲಕ್ಷ್ಮಿ, ದೇವೇಂದ್ರ ಚಾವಡಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಹಾಗೂ ತೃತೀಯ ಸೆಮಿಸ್ಟರ್ ನ ರೋಹಿತ್, ಸ್ನೇಹಾ ತೇಲಕರ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…