ನರಸಿಂಗರಾವ ಹೇಮನೂರರ ‘ನೆನಪು ನೂರು ನೂರು ತರಹ’ ಕೃತಿ ಬಿಡುಗಡೆ

ಕಲಬುರಗಿ: ಕವಿ, ಲೇಖಕರು ಸಮಾಕಾಲೀನ ವಿದ್ಯಮಾನಗಳಿಗೆ ಸ್ಪಂದಿಸಬೇಕು ಎಂದು ಹುಮನಾಬಾದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಹಾಗೂ ಏಕದಂಡಗಿ ಮಠದ ಅಜೇಂದ್ರ ಸ್ವಾಮಿ ಹೇಳಿದರು.

ಕಾವ್ಯ ಬರೆದ ಕವಿಗೆ ಯಶಸ್ಸು, ಸಂಪಾದನೆ ತಂದುಕೊಡಬೇಕು, ಓದಿದವರನ್ನು, ಬರೆದವರನ್ನು ರಕ್ಷಿಸುವಂತಿರಬೇಕು ಎಂದು ತಿಳಿಸಿದರು.

ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಸೇಡಂ ಸಾಂಸ್ಕೃತಿಕ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಕಲಾಮಂಡಳದಲ್ಲಿ ಭಾನುವಾರ ನಡೆದ ಹಿರಿಯ ಕವಿ ನರಸಿಂಗರಾವ ಹೇಮನೂರ ಅವರ “ನೆನಪು ನೂರು ನೂರು ತರಹ” ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಾಹಿತ್ಯಕ್ಕೆ ಒಂದು ಭಾವ ಮುಖ್ಯವಾಗಿದ್ದು, ಇಷ್ಟಪಟ್ಟು ಬರೆಯುವುದಕ್ಕಿಂತ ಇಷ್ಟಪಟ್ಟು ಬರೆಯಬೇಕು ಎಂದು ವಿವರಿಸಿದರು.

ಪುಸ್ತಕ ಕುರಿತು ಭೀಮರಾಯ ಹೇಮನೂರ ಮಾತನಾಡಿ, ನರಸಿಂಗರಾವ ಹೇಮನೂರ ಅವರ ಈ ಕಾವ್ಯದಲ್ಲಿ ಜೀವನದ ಸೊಗಸಿದೆ. ಪ್ರಾದೇಶಿಕ ಭಾಷೆಯ ಸೊಗಡಿದೆ. ಕಿರಿದರಲ್ಲಿ ಹಿರಿದನ್ನು ಕಟ್ಟಿಕೊಡುವ ತಾಕತ್ತಿದೆ ಎಂದು ಬಣ್ಣಿಸಿದರು.

ಹಿರಿಯ ಸಾಹಿತಿ ಪ. ಮಾನು ಸಗರ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಮುಖ್ಯ ಅತಿಥಿಯಾಗಿದ್ದರು. ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್. ನಿರಗುಡಿ, ಸಂಸ್ಕೃತಿ ಪ್ರಕಾಶನದ ಪ್ರಭಾಕರ ಜೋಶಿ ವೇದಿಕೆಯಲ್ಲಿದ್ದರು. ಡಾ. ಮಲ್ಲಿನಾಥ ತಳವಾರ ನಿರೂಪಿಸಿದರು.

ಮಹಿಪಾಲರೆಡ್ಡಿ ಮುನ್ನೂರ್, ದೇವೇಗೌಡ ತೆಲ್ಲೂರ, ಎಚ್.ಎಸ್. ಬೇನಾಳ, ಡಾ. ಗಾಂಧೀಜಿ ಮೋಳಕೇರಿ, ವೆಂಕಟೇಶ ನೀರಡಗಿ, ಕಿರಣ ಪಾಟೀಲ, ವೆಂಕಟೇಶ ಜನಾದ್ರಿ, ಕೆ.ಎಸ್. ಬಂಧು, ಡಾ. ಕಟ್ಟಿ, ಶಿವರಂಜನ್ ಸತ್ಯಂಪೇಟೆ ಇತರರು ಇದ್ದರು.

ಕೋವಿಡ್ ನಿಯಮದ ಪ್ರಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಮಾಸ್ಕ್ ವಿತರಿಸಲಾಯಿತು. ಸಹೃದಯರ ಕೈಗೆ ಸಾನಿಟೈಸರ್ ಕೂಡ ಸಿಂಪಡಿಸಲಾಯಿತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420