ಚಿತ್ತಾಪುರ: ತಾಲೂಕಿನ ಟೆಂಗಳಿ ಕ್ರಾಸ್ ನಿಂದ ತೊನಸನಹಳ್ಳಿ(ಟಿ) ಮತ್ತು ಟೆಂಗಳಿ ಗ್ರಾಮಗಳಿಗೆ ಕೂಡುವ ರಸ್ತೆ ಸುಮಾರು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು.
ವಾಹನಗಳು ಚಲಿಸಲು ತೊಂದರೆಯಾಗುತ್ತಿದೆ.ಜನರು ಪ್ರಯಾಣ ಮಾಡುವಾಗ ತಮ್ಮ ಪ್ರಾಣವನ್ನು ಕೈಯಲ್ಲಿ ಹೀಡಿದುಕೊಂಡು ಪ್ರಯಾಣಿಸುವ ಪರಿಸ್ಥಿತಿಯಲ್ಲಿ ರಸ್ತೆ ಹದಗೆಟ್ಟಿದೆ.ಇಲ್ಲಿಯವರೆಗೆ ಈ ರಸ್ತೆಯಲ್ಲಿ ಸುಮಾರು ಅಪಘಾತಗಳು ನಡೆದು ಸಾವು-ನೋವುಗಳು ಸಂಭವಿಸಿವೆ. ಮತ್ತು ವಿಶೇಷವಾಗಿ ರೈತರಿಗೆ ನಡೆಯಲು ಕೂಡ ಬಾರದ ಎತ್ತು ಬಂಡಿಗಳಿಗು ಸಹ ಚಲಿಸಲು ಬಾರದ ಪರಿಸ್ಥಿತಿಯಲ್ಲಿ ರಸ್ತೆ ಕೆಟ್ಟಿದ್ದು ಸಾರ್ವಜನಿಕರಿಗೆ ಈ ರಸ್ತೆಯಿಂದ ತುಂಬಾ ತೊಂದರೆಯಾಗುತ್ತಿದೆ.
ಈ ರಸ್ತೆ ಮುಂದೆ ಕಾಳಗಿ ಮತ್ತು ಚಿಂಚೋಳಿ ಮುಖ್ಯ ರಸ್ತೆಗೆ ಸೇರುವುದರಿಂದ ಈ ರಸ್ತೆಯ ಮೂಲಕ ವಿಧ್ಯಾರ್ಥಿಗಳು ಶಾಲಾ-ಕಾಲೇಜು ಮತ್ತು ಅಧಿಕಾರಿಗಳು ಕಛೇರಿಗಳಿಗೆ ಹೋಗುವುದರಿಂದ ತಡವಾಗಿ ಅಲ್ಲಿಗೆ ತಲುಪುತ್ತಿದ್ದಾರೆ.
ಆದ ಕಾರಣ ಚಿತ್ತಾಪೂರ ಮತ್ತು ಚಿಂಚೊಳಿ ಕ್ಷೇತ್ರದ ಶಾಸಕರಾದ ಪ್ರಿಯಾಂಕ ಖರ್ಗೆ ಹಾಗೂ ಅವಿನಾಶ ಜಾಧವ ಅವರು ಕೂಡಲೇ ಎಚ್ಚೆತ್ತು ಈ ಕಡೆ ಗಮನಹರಿಸಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಈ ರಸ್ತೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಸಂಚರಿಸಲು ಅನೂಕೂಲ ಮಾಡಿಕೊಡುವಂತೆ ಸಂಬಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಬಹುಜನ ಸಮಾಜ ಪಕ್ಷ ಚಿತ್ತಾಪೂರ ಘಟಕದ ಅಧ್ಯಕ್ಷ ಆನಂದ ಎಮ್ ಮಸ್ಕಿ ಅವರು ಒತ್ತಾಯಿಸುತ್ತಾರೆ.
ಒಂದು ವೇಳೆ ಇದನ್ನು ಕೂಡಲೇ ಪರಿಹರಿಸದಿದ್ದರೆ ಟೆಂಗಳಿ ಕ್ರಾಸ ಹತ್ತಿರ ರಸ್ತಾರೋಕ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
View Comments
Super anna amzing