ಬೆಂಗಳೂರು: ಕ್ಷೌರಿಕರು ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ಕ್ಷೌರ ಸೇವೆ ನಿರಾಕರಿಸಿ ಮೀಸಲಾತಿಯಿಂದ ವಂಚಿತರಾಗಿದ್ದೇವೆ ಎಂದು ಕ್ಷೌರಿಕ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ.ಬಿ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಕ್ಷೌರಿಕರು ಬಲಿಷ್ಠ ಜಾತಿಗಳಿಗೆ ಮುಕ್ತವಾಗಿ ಕ್ಷೌರ ಸೇವೆಯನ್ನು ನೀಡಿ, ಪರಿಶಿಷ್ಟರನ್ನು ಹಾಗೂ ವಿಶ್ವಮಾನವ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ಕ್ಷೌರ ಸೇವೆ ಮಾಡದೆ ಕಡೆಗಣಿಸಿದ್ದಕಾಗಿ ಇವತ್ತು ನಾವು ಪರಿಶಿಷ್ಟ ಜಾತಿಗೆ ಸೇರಿಲ್ಲ. ಆ ಸಮಯದಲ್ಲಿ ಎಲ್ಲಾ ಸಮುದಾಯಕ್ಕೆ ಕ್ಷೌರ ಸೇವೆ ನೀಡಿದ್ದರೆ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರು ನಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸುತ್ತಿದ್ದರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾವು ಊರಿನ ಪ್ರಬಲ ಜಾತಿಗಳ ಮುಖಂಡರ ಹಾಗೂ ಬಲಿಷ್ಠ ಜಾತಿಗಳ ದೌರ್ಜನ್ಯಕ್ಕೆ ಮುಲಾಜಿಗೆ ಹೆದರಿ ಇವತ್ತು ಹಿಂದುಳಿದ ವರ್ಗದಲ್ಲಿ ಅಪಮಾನಕ್ಕೆ ಜಾತಿನಿಂದನೆ ಗೆ ಅಪಹಾಸ್ಯಕ್ಕೆ ಗುರಿಯಾಗಿ ಹಿಂದುಳಿದವರಲ್ಲಿ ಅತಿ ಹಿಂದುಳಿದವರ ಆಗಿ ಉಳಿದಿದ್ದೇವೆ. ಆದ್ದರಿಂದ ಈಗಲಾದರೂ ಎಲ್ಲಾ ದಲಿತ ಸಮುದಾಯಕ್ಕೆ ಕ್ಷೌರ ಸೇವೆಯನ್ನು ನೀಡಬೇಕಾಗಿ ರಾಜ್ಯದ ಎಲ್ಲಾ ಕ್ಷೌರಿಕರಲ್ಲೂ ಮನವಿ ಮಾಡಿದ್ದಾರೆ.
ಕ್ಷೌರಿಕರು ಪರಿಶಿಷ್ಟ ಜಾತಿಯ ಒಂದು ಭಾಗ ಅಂದರೆ ತಪ್ಪಾಗಲಾರದು ಆದ್ದರಿಂದ ಈಗಿನ ಭಾರತದ ಸರ್ವೋಚ್ಚ ನ್ಯಾಯಾಲಯ ರಾಜ್ಯಸರ್ಕಾರಗಳಿಗೆ ಒಳ ಮೀಸಲಾತಿ ನೀಡುವ ನಿರ್ದೇಶನವನ್ನು ನೀಡಿದ್ದು ಇದರ ಬಗ್ಗೆ ಪರಿಶಿಷ್ಟ ವರ್ಗದ ಸಂಘಟನೆಗಳು ಪರಿಶಿಷ್ಟ ವರ್ಗದ ಮಂತ್ರಿಗಳು ಮಾಜಿ ಮಂತ್ರಿಗಳು ಮಾಜಿ ಶಾಸಕರು ಒಗ್ಗೂಡಿ ಚರ್ಚೆ ನಡೆಸುತ್ತಿದ್ದಾರೆ. ಇದೇ ವೇಳೆ ಹಿಂದುಳಿದ ವರ್ಗಗಳ ಆಯೋಗದ ಈ ವರದಿಯನ್ನು ಸದನದಲ್ಲಿ ಮಂಡಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎನ್ನುವ ಮಾಜಿ ಸಚಿವ ಎಚ್. ಆಂಜನೇಯ ಅವರ ಮಾತುಗಳನ್ನು ರಾಜ್ಯಾಧ್ಯಕ್ಷರಾದ ಎಂ.ಬಿ ಶಿವಕುಮಾರ್ ಸ್ವಾಗತಿಸಿದ್ದಾರೆ.
ಆದರೆ ನಮ್ಮ ಕ್ಷೌರಿಕ ಸಮಾಜಕ್ಕೆ ಧ್ವನಿಯಿಲ್ಲದ ಜಾತಿಯ ಶಕ್ತಿಯಿಲ್ಲದೆ ಶಕ್ತಿ ಹೀನವಾದ ಈ ನಿರ್ಗತಿಕ ಕ್ಷೌರಿಕ ಸಮಾಜಕ್ಕೆ ಮಾನ್ಯ ಮುಖ್ಯಮಂತ್ರಿಗಳು. ಪರಿಶಿಷ್ಟ ವರ್ಗದ ಮಂತ್ರಿಗಳು. ಶಾಸಕರು. ಮಾಜಿ ಮಂತ್ರಿಗಳು ಸ್ವಯಂಪ್ರೇರಿತರಾಗಿ ನಮಗೆ ಶೈಕ್ಷಣಿಕವಾಗಿ. ರಾಜಕೀಯವಾಗಿ ಒಳಮೀಸಲಾತಿಯನ್ನು ಕೊಡಿಸಿ. ಸಾಮಾಜಿಕ ನ್ಯಾಯ ಕೊಡಬೇಕಾಗಿ ಇದೇ ಸಂಧರ್ಭದಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…