ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ: ಅಂಬರೀಶ್ ಬಿಲ್ಲವ್

0
38

ಶಹಾಪುರ : ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಕರ್ನಾಟಕದಲ್ಲಿ ಅದು ಕನ್ನಡದ ಮೇಲೆ ಹಿಂದಿ ಭಾಷೆ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸರಿಯಲ್ಲ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂದು ಕಲ್ಯಾಣ ಕರ್ನಾಟಕ ಯುವ ಸೇನೆ ರಾಜ್ಯಾಧ್ಯಕ್ಷ ಅಂಬರೀಶ್ ಬಿಲ್ಲವ್ ಹೇಳಿದರು.

ಇಂದು ಹಮ್ಮಿಕೊಂಡಿರುವ ಕೇಂದ್ರ ಸರ್ಕಾರದ ವಿರೋಧಿ ನೀತಿಯಾದ ಹಿಂದಿ ಸಪ್ತಾಹವನ್ನು ವಿರೋಧಿಸಿ ಮಾತನಾಡಿದರು.ಕನ್ನಡಕ್ಕೆ ೨೫೦೦ ವರ್ಷಗಳ ಇತಿಹಾಸವಿದೆ.ಭಾರತದ ಪುರಾತನ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯೂ ಒಂದು ಪ್ರಾಮುಖ್ಯತೆ ಪಡೆದಿದೆ ಕರ್ನಾಟಕದ ಆರು ಕೋಟಿ ಜನ ಆಡುವ ಭಾಷೆಯಾಗಿದೆ ಆದ್ದರಿಂದ ಕರ್ನಾಟಕದಲ್ಲಿ ಕನ್ನಡವೇ ಮನೆ ಮಾಡಿದೆ ಹಲವಾರು ವರ್ಷಗಳ ಸಾಹಿತ್ಯ ಪರಂಪರೆ ಕನ್ನಡ ಸಾಹಿತ್ಯಕ್ಕಿದೆ ಎಂದು ಹೇಳಿದರು.

Contact Your\'s Advertisement; 9902492681

ಕೇಂದ್ರ ಸರ್ಕಾರದ ವಿರೋಧ ನೀತಿ ಇವತ್ತೇ ಕೊನೆಯಾಗಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಈ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಪ್ರಕಾಶಗೌಡ ಬೆದವಟ್ಟಿ ಕಲಬುರಗಿ ವಿಭಾಗಿಯ ಅಧ್ಯಕ್ಷ ರಾದ ವೆಂಕಟೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here