ಕಲಬುರಗಿ: ಮನೆ ಕಳ್ಳತನ, ಸರಗಳ್ಳತನ, ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಜಪ್ತಿಯಾದ ಕೋಟ್ಯಂತರ ರೂಪಾಯಿ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ವಾರಸುದಾರರಿಗೆ ಇಂದು ನಗರ ಪೊಲೀಸ್ ಆಯುಕ್ತ ಎನ್ ಸತೀಶಕುಮಾರ ಅವರು ಹಿಂದಿರುಗಿಸಿದರು.
ಡಿಎಆರ್ ಮೈದಾನದಲ್ಲಿ ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ವಿವಿಧ ಠಾಣೆಗಳಲ್ಲಿ ೨೦೧೮ರಲ್ಲಿ ಪತ್ತೆಯಾದಸುಮಾರು ೩.೫೮ ಕೋಟಿ ರೂ. ಮೌಲ್ಯದ ಕಳ್ಳತನ ಪ್ರಕರಣಗಳು ದಾಖಲಾಗದ್ದು ಅವುಗಳಲ್ಲಿ ಸುಮಾರು ೧.೩೫ ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ನೀಡಲಾಯಿತು. ಒಟ್ಟು ೩೩೯ ಪ್ರಕರಗಳು ದಾಖಲಾಗಿವೆ. ಅವುಗಳಲ್ಲಿ ೧೩೦ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
೨೦೧೯ರಲ್ಲಿ ೪೦ ಪ್ರಕರಣಗಳು ದಾಖಲಾಗಿದ್ದು ೧೩೫ ಪ್ರಕರಣಗಳನ್ನು ಪತ್ತೆ ಮಾಡಲಾಗದೆ. ೪ ಕೋಟಿ, ೦೬ಲಕ್ಷ, ೩೫,೦೩೮ ರೂ. ಮೌಲ್ಯದ ಕಳ್ಳತನ ಪ್ರಕರಣದಲ್ಲಿ ೯೧ ಲಕ್ಷ ೮೫೨೩ ಮೌಲ್ಯದ ವಸ್ತುಗಳನ್ನು ಪತ್ತೆ ಮಾಡಲಾಗಿದ್ದು ಫೀರ್ಯಾದುದಾರಿಗೆ ಹಸ್ತಾಂತರಿಸಲಾಗಿದೆ.
೨೦೨೦ ನೇ ಸಾಲಿನಲ್ಲಿ ೧೭೯ ಪ್ರಕರಣಗಳು ದಾಖಲಾಗಿದ್ದು, ಅವುಳಲ್ಲಿ ೫೯ ಪ್ರಕರಣಗಳು ಪತ್ತೆ ಮಾಡಲಾಗಿದೆ. ೩ ಕೋಟಿ ೯ಲಕ್ಷ ೭೦,೩೪೪ ರೂ. ಮೌಲ್ಯದ ವಸ್ತುಗಳು ಕಳತನ ನಡೆದ ಕುರಿತು ಪ್ರಕರಣ ದಾಖಲಾಗಿತ್ತು. ಅವುಗಳಲ್ಲಿ ೮೮ ಲಕ್ಷ, ೮೩,೭೨೦ ರೂಪಾಯಿ ಮೌಲ್ಯದ ಸ್ವತ್ತು ಜಪ್ತಿಮಾಡಲಾಗಿದ್ದು, ೪೧,೮೧,೫೬೦ ರೂಪಾಯಿ ಮೌಲ್ಯದ ಸ್ವತ್ತು ಫಿರಿಯಾದುದಾರಿಗೆ ಹಿಂದುರಿಗಿಸಲಾಗಿದ್ದು, ೪೭.೦೨ ಲಕ್ಷ ರೂಪಾಯಿ ಮೌಲ್ಯದ ಸ್ವತ್ತು ಹಿಂದುರಿಗಿಸಬೇಕಾಗಿದೆ.
ಈ ಸಂದರ್ಭದಲ್ಲಿ ಎ.ಬಿ. ಮತ್ತು ಸಿ ವಿಭಾಗದ ನಗರ ಸಹಾಯಕ ಆಯುಕ್ತರು, ವಿವಿಧ ಠಾಣೆಯ ಪಿಐ ಹಾಗೂ ಸಿಬ್ಬಂದಿಗಳು ಉಪಸ್ಥಿತಿದ್ದರು.
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…