ಶಹಾಬಾದ: ಸುಮಾರು ಒಂದು ವರ್ಷದಿಂದ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಶಹಾಬಾದ ಉಪವಿಭಾಗದ ಅಪರಾಧ ಪತ್ತೆ ದಳದವರು ಬಂಧಿಸಿ ಸುಮಾರು 163 ಗ್ರಾಂ ಬಂಗಾರ, 50 ಸಾವಿರ ನಗದು ಹಣ ಹಾಗೂ ಐದು ಬೈಕಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೇವರ್ಗಿ ತಾಲೂಕಿನ ಬೀರಾಳ(ಕೆ) ಗ್ರಾಮದ ಶಿವ ಅಲಿಯಾಸ ಶಿವಪ್ಪ ಮಲ್ಲಪ್ಪ ತಣಕೇದಾರ ಬಂಧಿತ ಆರೋಪಿ.ಸುಮಾರು ಒಂದು ವರ್ಷದಿಂದ ವಿವಿಧ ಜಿಲ್ಲೆಯ ವಿವಿಧ ಗ್ರಾಮದ ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 163 ಗ್ರಾಂ ಬಂಗಾರ, 50 ಸಾವಿರ ನಗದು ಹಣ ಹಾಗೂ ಐದು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಲಬುರಗಿ ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್, ಹೆಚ್ಚುವರಿ ಎಸ್ಪಿ ಪ್ರಸನ್ನಕುಮಾರ ದೇಸಾಯಿ, ಡಿವಾಯ್ಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ಪಿಐ ಅಮರೇಶ.ಬಿ, ಚಿತ್ತಾಪೂರ ಪಿಐಕಲ್ಲದೇವರು,ವಾಡಿ ಪಿಎಸ್ಐ ದಿವ್ಯಾ, ನಗರದ ಪಿಎಸ್ಐ ತಿರುಮಲೇಶ, ಸಿಬ್ಬಂದಿಗಳಾದ ಗುಂಡಪ್ಪ ಕೋಗನೂರ್, ನಾಗೇಂದ್ರ ತಳವಾರ, ಬಸವರಾಜ ಹುಚ್ಚಡ್, ವಿಶ್ವಾನಾಥ ಹೂಗಾರ, ಲಕ್ಷ್ಮಣ ವಾಡಿ,ಬಸವರಾಜ ವಾಡಿ ಸೇರಿದಂತೆ ಸಿಡಿಆರ್ ತಂಡದ ಬಲರಾಮ ಸಹಯೋಗದಿಂದ ಆರೋಪಿಯನ್ನು ಬಂಧಿಸಿದ್ದಾರೆ.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…