ಕಲಬುರಗಿ: ಇಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಡ್ರಧ್ವಜಾರೋಹಣ ನೆರವೇರಿಸಿ ದರು.
ಸಾವಿರಾರು ಕೋಟಿ ರು.ಗಳ ಕಾಮಗಾರಿಗಳ ಶಿಲನ್ಯಾಸ ಮತ್ತು ಲೋಕಾರ್ಪಣೆ ಮಾಡಿ ಮಾತನಾಡಿದ ಭಾಷಣದ ಹೈಲೈಟ್ಸ್.
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೆ ಹೈದರಬಾದ್-ಕರ್ನಾಟಕ ಪ್ರದೇಶವನ್ನು “ಕಲ್ಯಾಣ ಕರ್ನಾಟಕ” ಎಂದು ಮರು ನಾಮಕರಣ ಮಾಡಿ ಇಲ್ಲಿನ ಬಹುಜನರ ಒತ್ತಾಸೆಯನ್ನು ಈಡೇರಿಸಲಾಗಿದೆ.
ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಸ್ಥಾಪನೆಗೊಂಡಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘವು ನಿಗದಿತ ಗುರಿ ಮುಟ್ಟುವಲ್ಲಿ ಸರ್ವರ ಸಹಕಾರದೊಂದಿಗೆ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ನಾನು ನಂಬಿದ್ದೇನೆ.
ಮೂರು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರಗಿ, ಬೀದರ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು.
ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.
ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮಥ್ರ್ಯದ 10,000 ಕೋಟಿ ರೂ.ಗಳ ವೆಚ್ಚದಲ್ಲಿ ಜಲ ವಿದ್ಯುತ್ ಯೋಜನೆಯು ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜೊತೆ ಮಾತುಕತೆಯ ನಂತರ ಸೂಕ್ತ ಕ್ರಮವಹಿಸಲಾಗುವುದು.
ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ಅನುಭವ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯಾರಂಭ ಮಾಡಲಾಗುವುದು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಗೊಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಅತಿ ಹಿಂದುಳಿದ ಪ್ರದೇಶಗಳಾಗಿದ್ದು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಾಧ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ.
ಕೋವಿಡ್, ಪ್ರವಾಹ ಪರಿಸ್ಥಿತಿ ಸೇರಿದಂತೆ
ರಾಜ್ಯದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕೇಂದ್ರ ಸಚಿವರು, ಪ್ರಧಾನಿಯವರನ್ನು ಭೇಟಿಯಾಗಿ ಚರ್ಚಿಸಲಾಗುವುದು.
ಕಲ್ಯಾಣ ಕರ್ನಾಡಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅನುದಾನ ನೀಡಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಹಿಂದೆ ಬೀಳುವ ಪ್ರಶ್ಬೆಯೆ ಇಲ್ಲ. ಸಮರ್ಪಕ ಅನುದಾನ ನೀಡಲಾಗುವುದು.
ಅಧಿವೇಶನ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತಾವು ಇರಾದೆ ಹೊಂದಿದ್ದು, ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…