ಮಿಂಡಹಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ”

ಮಾಲೂರು: ತಾಲ್ಲೂಕಿನ ಶಿವಾರಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಂಡಹಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರಾದ ಚಂದ್ರುರವರು ಮಾತನಾಡಿ ಇಂದು ಮಿಂಡಹಳ್ಳಿ ಗ್ರಾಮದಲ್ಲಿ ಸರಳವಾಗಿ ವಿಶ್ವಕರ್ಮ ಜಯಂತಿಯನ್ನು ಇಲ್ಲಿ ಯಾವುದೇ ಜಾತಿ, ಮತ ಭೇದವಿಲ್ಲದೆ ಆಚರಿಸುತ್ತಿದ್ದೇವೆ, ಇತಿಹಾಸದಲ್ಲಿ ವಿಶ್ವಕರ್ಮ ಎಂದರೆ ಈ ಸೃಷ್ಟಿಯ ಬ್ರಹ್ಮಾಂಡದ ಸೃಷ್ಟಿಕರ್ತ ಅನ್ನುತ್ತಾರೆ, ಎಲ್ಲಾ ದೇವತೆಗಳ ಆಯುಧಗಳನ್ನು ರಕ್ಷಣೆ ಮಾಡಿರುವವರು, ಮತ್ತೆ ದ್ವಾರಕಾನಗರ, ಹಸ್ತಿನಾಪುರ ಪಟ್ಟಣ ರಕ್ಷಣೆ ಮಾಡಿರುವವರು ಎಂದು ನಾವು ಪುರಾಣಗಳಲ್ಲಿ ಓದಬಹುದು ಎಂದರು.

ಇಂದು ಈ ಗ್ರಾಮದಲ್ಲಿ ಎಲ್ಲಾ ಯುವಕರು ಸೇರಿ ವಿಶ್ವಕರ್ಮ ಜಯಂತಿ ಮಾಡುತ್ತಿರುವುದು ಖುಷಿಯ ವಿಷಯವಾಗಿದೆ. ಮುಖ್ಯವಾಗಿ  ಯುವಕರು ಯಾವುದೇ ರೀತಿಯ ದುಶ್ಚಟಗಳಿಗೆ ಒಳಗಾಗದೆ ವಿದ್ಯಾವಂತರಾಗಿ ,ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು, ಅದಕ್ಕಾಗಿ ಒಳ್ಳೆಯ ದಾರಿಯಲ್ಲಿ ನಡೆಯಬೇಕು ಎಂದರು.

ವಿಶ್ವಕರ್ಮದವರಿಗಾಗಿ ಕರ್ನಾಟಕ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ. ಅಲ್ಲದೆ ಇದರಲ್ಲಿ “ಅರಿವು ಶೈಕ್ಷಣಿಕ ಸಾಲ” ಯೋಜನೆಯಿದ್ದು, ವಿದ್ಯಾಭ್ಯಾಸ ಮಾಡುವವರು ಸುಮಾರು 2 ಲಕ್ಷದ ವರೆಗೆ ಶೈಕ್ಷಣಿಕ ಸಾಲ ಸೌಲಭ್ಯ ಪಡೆಯಬಹುದಾಗಿದೆ ಎಂದರು.

ಸ್ವಂತ ಉದ್ಯೋಗ ಮಾಡುವವರಿಗೆ 50000 ರಿಂದ 60000ವರೆಗೆ ನೇರ ಸಾಲ ಸೌಲಭ್ಯ ಯೋಜನೆ,  ಸ್ವಾವಲಂಬನೆ ಯೋಜನೆ ಹಾಗೂ ಇನ್ನೂ ಅನೇಕ ಯೋಜನೆಗಳಿದ್ದು, ಎಲ್ಲವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಡೈರಿ ಮುನಿರಾಜು, ರವೀಂದ್ರ ಎಂ ಉಪನ್ಯಾಸಕರು, ಚಂದ್ರು ಮಾಸ್ಟರ್, ನಟರಾಜ್, ನಾಗರಾಜ್ ಎಂ.ಎಲ್, ಲಕ್ಷ್ಮಿ ನಾರಾಯಣ ಚಾರಿ, ಶಿವಲಿಂಗಚಾರಿ, ಚಂದ್ರಚಾರಿ, ಬ್ರಹ್ಮ ಚಾರಿ, ಸುನಿಲ್ ಚಾರಿ, ನವೀನ್ ಚಾರಿ, ಮಿಥುನಚಾರಿ,ಶೇಖರಚಾರಿ, ಶಂಕರಚಾರಿ, ಶ್ರೀನಿವಾಸಚಾರಿ, ಗೌತಮ್ ಚಾರಿ, ಗಗನ್ ಚಾರಿ, ಅರುಣ್ ಕುಮಾರ್ ಎಂ, ಶ್ರೀಕಾಂತ್. ಡಿ, ಶೇಖರ್.ಎಂ.ಎಸ್ ಹಾಗೂ ಮಿಂಡಹಳ್ಳಿ ಗ್ರಾಮದ ವಿಶ್ವಕರ್ಮ ಕುಲಬಾಂಧವರು ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

3 mins ago

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

10 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420