ಬೆಂಗಳೂರು: ಕೋವಿಡ್-೧೯ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತರರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿರುತ್ತದೆ.
ಕೋವಿಡ್-೧೯ ಲಾಕ್ಡೌನ್ ಸಡಿಲ ಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಹಾರಾಷ್ಟ್ರ ರಾಜ್ಯಕ್ಕೆ ಬೆಂಗಳೂರು, ದಾವಣಗೆರೆ, ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತ್ತಿದೆ. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿರುತ್ತದೆ.
ಮುಂಗಡ ಆಸನಗಳನ್ನು www.ksrtc.in ವೆಬ್ಸೈಟ್ಮತ್ತು ನಿಗಮದ / ಫ್ರಾಂಚೈಸಿ ಕೌಂಟರ್ಗಳ ಮುಖಾಂತರ ಕಾಯ್ದಿರಿಸಿ ಕೊಳ್ಳಬಹುದಾಗಿದೆ. ಪ್ರಯಾಣಿಕರು ಸದರಿ ಸೌಲಭ್ಯದ ಸದುಪಯೋಗ ಪಡೆಯಲು ಪ್ರಕಟಣೆ ತಿಳಿಸಿದೆ.