ಶಿಕ್ಷಣದ ಗುಣಮಟ್ಟ ಕುಸಿದಿದೆ: ಶಿಕ್ಷಕರ ದಿನಾಚರಣೆಯಲ್ಲಿ ಶಾಸಕ ರಾಜುಗೌಡ ಹೇಳಿಕೆ

ಸುರಪುರ: ಪ್ರತಿ ವರ್ಷದ ಹತ್ತನೆ ತರಗತಿ ಪಿಯುಸಿ ಫಲಿತಾಂಶ ನೋಡಿದಲ್ಲಿ ನಮ್ಮದು ಕೊನೆಯ ಸ್ಥಾನದಲ್ಲಿ ಇರುವುದು ಕಂಡು ನಿಜಕ್ಕೂ ಬೇಸರವಾಗುತ್ತದೆ.ಅದರಿಂದ ಕೇವಲ ನನಗೆ ಮಾತ್ರವಲ್ಲ ನಿಮಗೂ ಇದರಿಂದ ಬೇಸರವಾಗಿರಲಿದೆ.ಆದ್ದರಿಂದ ಈ ಮುಂದೆ ನಮ್ಮ ತಾಲೂಕು ಮತ್ತು ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದೊರೆಯುವಂತೆ ಶಿಕ್ಷಣ ನೀಡಿ ಎಂದು ಶಾಸಕ ರಾಜುಗೌಡ ಮನವಿ ಮಾಡಿದರು.

ನಗರದ ಪ್ರೇರಣಾ ಶಾಲೆಯ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಾರ್ಯಾಲಯ ಸರಕಾರಿ ನೌಕರರ ಸಂಘ ಹಾಗು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತಿತರೆ ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ,ಕೊರೊನಾ ದಿಂದಾಗಿ ತರಗತಿಗಳು ನಡೆಯುತ್ತಿಲ್ಲ ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ.

ಆದ್ದರಿಂದ ತಾಲೂಕಿನಲ್ಲಿಯ ಎಲ್ಲಾ ೬೭ ಶಾಲೆಗಳಲ್ಲಿ ಮಕ್ಕಳ ಕಲಿಕೆಗಾಗಿ ಆನ್ಲೈನ್ ಶಿಕ್ಷಣಕ್ಕಾಗಿ ಪ್ರತಿ ಶಾಲೆಗೆ ಟಿ.ವಿ ಮತ್ತು ಕ್ಯಾಮರಾ ಕೊಡಿಸಿ ಇದಿರಿಂದ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.ಅಲ್ಲದೆ ಅನೇಕ ಶಾಲೆಗಳಲ್ಲಿ ಗಣಿತ ವಿಜ್ಞಾನ ಇಂಗ್ಲೀಷಿನಂತ ಕಠಿಣ ವಿಷಯಗಳಿಗೆ ಶಿಕ್ಷಕರ ಕೊರತೆ ಇರುವುದು ಗಮನಕ್ಕಿದೆ.ಆದ್ದರಿಂದ ಬೆಂಗಳೂರು ಮೈಸೂರು ಭಾಗದಲ್ಲಿನ ನುರಿತ ಉತ್ತಮ ಭೋದನಾ ಶಿಕ್ಷಕರನ್ನು ಸಂಪರ್ಕಿಸಿ ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಮಾಡಲು ವಿನಂತಿಸುವುದಾಗಿ ತಿಳಿಸಿದರು.

ಎಸ್.ಸಿ ಮತ್ತು ಎಸ್.ಟಿ ಮಕ್ಕಳಿಗೆ ಮೋಬೈಲ್ ಕೊಡುವ ಬಗ್ಗೆ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.ಅವರಿಗೆ ಈ ಕಾರ್ಯಕ್ರಮದ ಮೂಲಕ ವಿನಂತಿಸಿ ಎಸ್‌ಸಿ ಎಸ್‌ಟಿ ಎಂದು ತಾರತಮ್ಯ ಬೇಡ ರಾಜ್ಯದಲ್ಲಿನ ಎಲ್ಲಾ ಮಕ್ಕಳಿಗೆ ಮೋಬೈಲ್ ಕೊಡುವಂತೆ ಮನವಿ ಮಾಡುವುದಾಗಿ ತಿಳಿಸಿ,ಮುಂದೆ ಸರಕಾರಿ ನೌಕರಿ ಸರಕಾರಿ ಶಾಲೆಯಲ್ಲಿ ಕಲಿತವರಿಗೆ ಸಿಗುವಂತ ಯೋಜನೆ ಜಾರಿಗೊಳಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ನಾನು ಒಳ್ಳೆಯದು ಮಾಡಿದಾಗ ಶಹಬ್ಬಾಶ್ ಅನ್ನಿ ನಾನು ಗೊತ್ತಿಲ್ಲದೆ ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳಿ ನಾನು ಇಂದು ಶಾಸಕನಾಗಲು ಮಂಡಳಿಯ ಅಧ್ಯಕ್ಷನಾಗಲು ಅಕ್ಷರ ಕಲಿಸಿದ ನೀವೆಲ್ಲ ಶಿಕ್ಷಕರೆ ಕಾರಣ ಎಂದು ಶಿಕ್ಷಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ನಮ್ಮ ಯಾದಗಿರಿ ಜಿಲ್ಲೆ ಈ ವರ್ಷದ ಫಲಿತಾಂಶದಲ್ಲಿ ೫೮% ತಲುಪಿದೆ ಮುಂದಿನ ವರ್ಷದ ಫಲಿತಾಂಶದಲ್ಲಿ ಶೇ ೬೫ ಫಲಿತಾಂಶ ತರುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಜಿ.ಪಂ ಅಧ್ಯಕ್ಷ ಬಸನಗೌಡ ಯಾಡಿಯಾಪುರ ಜಿ.ಪಂ ಮಾಜಿ ವಿರೋಧ ಪಕ್ಷದ ನಾಯಕ ಹೆಚ್.ಸಿ ಪಾಟೀಲ ಹಾಗು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ iಹಾದೇವರಡ್ಡಿ ಮಾತನಾಡಿದರು.

ನಂತರ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಾದ ನಾಗನಗೌಡ ಸರಕಾರಿ ಪ್ರೌಢಶಾಲೆ ಹುಣಸಗಿ ಎಸ್.ಎಸ್.ಮಾರನಾಳ ಸರಕಾರಿ ಪ್ರೌಢ ಶಾಲೆ ಹಗರಟಿಗಿ ಸ್ಯಾಮುವೆಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖುರೇಶಿ ಮೊಹಲ್ಲಾ ಸುರೇಶ ಸರಕಾರಿ ಪ್ರಾಥಮಿಕ ಶಾಲೆ ಸಿದ್ದಾಪುರ ಹಾಗು ಸಿದ್ದಣ್ಣ ದನಗುಂಡ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಯಾಳಗಿ ಇವರುಗಳನ್ನು ಹಾಗು ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ ೧೭ ಜನ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹಳ್ಳೆಪ್ಪ ಕಾಂಜಾಂಜಿ ತಾಲೂಕು ಅಧ್ಯಕ್ಷ ಸೋಮರಡ್ಡಿ ಮಂಗಿಹಾಳ ಆರ್.ಕೆ ಕೋಡಿಹಾಳ ಯಲ್ಲಪ್ಪ ಕಾಡ್ಲೂರ ಸಂಜೀವ ದರಬಾರಿ ಚಂದ್ರಶೇಖರ ವಕ್ರಾಣಿ ಶರಣಗೌಡ ಪಾಟೀಲ್ ಚುನ್ನು ಪಟೇಲ್ ಎಪಿಎಫ್‌ನ ವಿನೋದ ವೇದಿಕೆ ಮೇಲಿದ್ದರು.ಬಿಆರ್‌ಸಿ ಖಾದರ ಪಟೇಲ್ ಪ್ರಾಸ್ತಾವಿಕವಾಗಿ ಮಾತನಾಡಿದರು,ಶರಣಬಸವ ಗೋನಾಲ ಸ್ವಾಗತಿಸಿದರು ಶಿವಶರಣಪ್ಪ ಶಿರೂರ ನಿರೂಪಿಸಿದರು ರಾಜಶೇಖರ ದೇಸಾಯಿ ನಿರ್ವಹಿಸಿದರು ಹಾಗು ಸಿಆರ್‌ಪಿ ಶಿವಾನಂದ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420