ಸುರಪುರ: ಈಗಾಗಲೆ ದೇಶಾದ್ಯಂತ ಕೊರೊನಾ ವೈರಸ್ ತನ್ನ ಹಾವಳಿ ಮುಂದುವರೆಸಿದ್ದರಿಂದಾಗಿ ದೇಶದಲ್ಲಿನ ಸುಮಾರು ೧೮ ಕೋಟಿಯಷ್ಟು ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ.ಅವರೆಲ್ಲರ ನೆರವಿಗೆ ನಿಲ್ಲಬೇಕಾದ ಸರಕಾರ ನಿರ್ಲಕ್ಷ್ಯ ತೋರಿದೆ.ಈಗ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಡೆಯುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕು ಅಧ್ಯಕ್ಷ ಶರಣಪ್ಪ ಹನ್ಸೂರ ಬೇಸರ ವ್ಯಕ್ತಪಡಿಸಿದರು.
ಬಿಎಸ್ಪಿ ಪಕ್ಷದ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ರಾಜ್ಯದಲ್ಲಿನ ಎಲ್ಲಾ ಶಾಲಾ ವಿದ್ಯಾರ್ಥಿಗಳ ಪೋಷಕರು ಕೋವಿಡ್ ಲಾಕ್ಡೌನ್ ಕಾರಣದಿಂದ ಜೀವನ ನಡೆಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ,ಇಂತಹ ಸಂದರ್ಭದಲ್ಲಿ ಖಾಸಗಿ ಶಾಲೆಗಳು ಶುಲ್ಕ ಕಟ್ಟುವಂತೆ ಆದೇಶಿಸುತ್ತಿವೆ.
ಜನರ ಬಳಿ ಹಣವಿಲ್ಲದೆ ಮಕ್ಕಳ ಶುಲ್ಕ ಕಟ್ಟಲೊ ಎಷ್ಟೊ ಪೋಷಕರು ತಮ್ಮ ತಾಳಿಯನ್ನು ಒತ್ತೆಯಿಟ್ಟ ಘಟನೆಗಳು ನಡೆದಿವೆ.ಅಲ್ಲದೆ ಖಾಸಗಿ ಶಾಲೆಯ ಫೀಜು ಕಟ್ಟಲಾಗದೆ ಶಾಲೆ ಬಿಡಿಸಿದ ಮತ್ತು ಖಾಸಗಿ ಶಾಲೆಯಿಂದ ಸರಕಾರಿ ಶಾಲೆಗೆ ಸೇರಿಸಿದ ಉದಾಹರಣೆಗಳಿವೆ.ಆದ್ದರಿಂದ ಸರಕಾರ ಕೂಡಲೆ ಖಾಸಗಿ ಮತ್ತು ಸರಕಾರಿ ಶಾಲೆಗಳ ಶುಲ್ಕ ರದ್ದು ಪಡಿಸಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಸಿಬ್ಬಂದಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಪರಶುರಾಮ ದೊಡ್ಮನಿ ಜಟ್ಟಿಂಗರಾಯ ನಾಯಕ ಎಮ್.ಎಸ್.ಮೇಲಿನಮನಿ ನಬೀಸಾಬ್ ವಜ್ಜಲ್ ಹುಸೇನಸಾಬ ಹುಣಸಗಿ ಪರಶುರಾಮ ದೊಡ್ಮನಿ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…