ಅಶೋಕ ಗಸ್ತಿ ನಮ್ಮ ಸಮಾಜದ ಅಭಿವೃಧ್ಧಿಯ ಹರಿಕಾರರಾಗಿದ್ದರು: ಅಪ್ಪಣ್ಣ ಚಿನ್ನಾಕಾರ

ಸುರಪುರ: ಕೇವಲ ಎರಡೆ ತಿಂಗಳ ಹಿಂದೆ ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡಿದ್ದ ಅಶೋಕ ಗಸ್ತಿಯವರು ನಮ್ಮ ಸವಿತಾ ಸಮಾಜದ ಅಭಿವೃಧ್ಧಿಯ ಹರಿಕಾರರಾಗಿದ್ದರು ಎಂದು ಸವಿತಾ ಸಮಾಜ ಸಂಘದ ಜಿಲ್ಲಾಧ್ಯಕ್ಷ ಅಪ್ಪಣ್ಣ ಚಿನ್ನಾಕಾರ ಮಾತನಾಡಿದರು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಅಶೋಕ ಗಸ್ತಿಯವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಗಸ್ತಿಯವರು ತುಂಬಾ ಕಷ್ಟದಲ್ಲಿಯೆ ಶಿಕ್ಷಣ ಪಡೆದು ವಕೀಲರಾಗಿ ಅನೇಕ ಜನರಿಗೆ ನ್ಯಾಯ ಕೊಡಿಸಿದ್ದಾರೆ.ಅವರ ಪಕ್ಷಕ್ಕಾಗಿ ದುಡಿದ ಶ್ರಮ ಮತ್ತು ಪ್ರತಿಭೆಯನ್ನು ನೋಡಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಲಾಗಿತ್ತು.ಆದರೆ ಇಂದು ಅವರು ನಮ್ಮನ್ನು ಅಗಲಿರುವುದು ತುಂಬಾ ನೋವಿನ ಸಂಗತಿಯಾಗಿದೆ ಎಂದರು.

ರೈತ ಹೋರಾಟಗಾರ ಯಲ್ಲಪ್ಪ ಚಿನ್ನಾಕಾರ ಮಾತನಾಡಿ,ಅಶೋಕ ಗಸ್ತಿಯವರು ನಮ್ಮ ಸಮಾಜದ ಏಳಿಗೆಗಾಗಿ ತುಂಬಾ ಶ್ರಮ ಪಟ್ಟಿದ್ದರು.ಅವರನ್ನು ಕಳೆದುಕೊಂಡು ಸವಿತಾ ಸಮಾಜ ಬಡವಾಗಿದೆ.ಸರಕಾರ ಅಶೋಕ ಗಸ್ತಿಯವರ ನೆನಪಿಗಾಗಿ ಏನಾದರು ಯೋಜನೆಯನ್ನು ರೂಪಿಸಬೇಕು ಎಂದರು.ಅಲ್ಲದೆ ಭಗವಂತ ಗಸ್ತಿಯವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗು ಅಶೋಕ ಗಸ್ತಿಯವರ ಆತ್ಮಕ್ಕೆ ಶಾಂತಿ ದೊರೆಯಲಿದೆ ಪ್ರಾರ್ಥಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಗಸ್ತಿಯವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು.

ಸಭೆಯಲ್ಲಿ ಸವಿತಾ ಸಮಾಜದ ರಾಜ್ಯ ಸಮಿತಿ ನಿರ್ದೇಶಕ ಸೂರ್ಯಕಾಂತ ಚಿನ್ನಾಕಾರ ಮುಖಂಡರ ರಮೇಶ ಚಿನ್ನಾಕಾರ ಮಂಜುನಾಥ ಚಿನ್ನಾಕಾರ ಮಂಜುನಾಥ ಅನವರ ತಿಪ್ಪಣ್ಣ ಉಟ್ಗೂರ ಬಾಲರಾಜ ಚಿನ್ನಾಕಾರ ಯಲ್ಲಪ್ಪ ದುಗನೂರ ದೇವಿಂದ್ರಪ್ಪ ಅಜ್ಜಕೊಲಿ,ನರಸಪ್ಪ ಚಿನ್ನಾಕಾರ ನರಸಪ್ಪ ಮುಂದಿನಮನಿ ಪರಶುರಾಮ ಚಿನ್ನಾಕಾರ ಬಸವರಾಜ ಗೌಡಗೇರಿ ವಿಶ್ವನಾಥ ನಸಲವಾಯಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420