ಕಲಬುರಗಿ: ಕಲ್ಯಾಣ ಕರ್ನಾಟಕದ ವಕೀಲರನ್ನು ಕಡೆಗಣಿಸಿ ಬೇರೆ ಜಿಲ್ಲೆಯ ವಕೀಲರನ್ನ ಕಲಬುರಗಿ ಹೈಕೋರ್ಟ್ ಗೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಶಾಸಕರಾದ ಪ್ರಿಯಾಂಕ್ ಖರ್ತೆ ಅವರು ಆ ಹುದ್ದೆಗೆ ಕಲ್ಯಾಣ ಕರ್ನಾಟಕದ ವಕೀಲರನ್ನು ನೇಮಿಸುವಂತೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಹಿಂದೆಯೂ ಕೂಡಾ ಇದೇ ತರ ಬೇರೆ ಭಾಗದ ವಕೀಲರನ್ನು ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನಾಮ ನಿರ್ದೇಶನ ಮಾಡಿದಾಗ ಕಲಬುರಗಿ ವಕೀಲರ ಸಂಘ ವಿರೋಧಿಸಿತ್ತು. ಆಗ ಭರವಸೆ ನೀಡಿದ್ದ ಸಿಎಂ ಮತ್ತೊಮ್ಮೆ ಹುದ್ದೆ ಸೃಜನೆಯಾದರೆ ಕಕ ಭಾಗದ ವಕೀಲರನ್ನೇ ನೇಮಿಸುವುದಾಗಿ ಹೇಳಿದ್ದರು. ಆದರೆ ಈಗ ಮತ್ತೊಮ್ಮೆ ಕಕ ಭಾಗದ ವಕೀಲರನ್ನು ಕಡೆಗಣಿಸಿ ಬೇರೆ ಭಾಗದ ವಕೀಲರನ್ನು ಅದೇ ಹುದ್ದೆಗೆ ನೇಮಿಸುವ ಮೂಲಕ ಕಕ ಭಾಗದ ಕುರಿತು ಮಲತಾಯಿ ಧೋರಣೆ ಮುಂದುವರೆಸಿದ್ದಾರೆ ಎಂದು ಶಾಸಕರು ಟೀಕಿಸಿದ್ದಾರೆ.
ಕಕ ಭಾಗವು ಸಾಕಷ್ಟು ಹಿರಿಯ ವಕೀಲರನ್ನು ಹೊಂದಿದ್ದು ಈ ಭಾಗದಿಂದ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಕಲಬುರಗಿ ಹೈಕೋರ್ಟ್ ನಲ್ಲಿ ನೂರಾರು ವಕೀಲರು ತಮ್ಮ ವೃತ್ತಿ ಮಾಡುತ್ತಿದ್ದು ಈಗ ಬೇರೆ ಭಾಗದ ವಕೀಲರನ್ನು ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಿಸಿರುವುದು ಈ ಭಾಗದ ವಕೀಲರಿಗೆ ಅನ್ಯಾಯ ಮಾಡಿದಂತಾಗಿರುವುದು ಅಲ್ಲದೇ ಈ ಭಾಗವನ್ನು ಕಡೆಗಣಿಸಿದಂತಾಗಿದೆ ಎಂದು ಮಾನ್ಯ ಶಾಸಕರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.
ಕಕ ಭಾಗದ ವಕೀಲರನ್ನು ಹೊರತುಪಡಿಸಿ ಬೇರೆ ಭಾಗದ ವಕೀಲರನ್ನು ನೇಮಿಸಿದರೆ ಅವರು ಸರಿಯಾಗಿ ಕೋರ್ಟ್ ಕಲಾಪದಲ್ಲಿ ಭಾಗವಹಿಸಲು ಆಗದೆ ಪ್ರಕರಣಗಳು ವಿಲೇವಾರಿಯಾಗದೇ ಬಾಕಿ ಉಳಿಯುತ್ತವೆ ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.
ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕಲಬುರಗಿ ಹೈಕೋರ್ಟ್ ಗೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹುದ್ದೆಗೆ ಕಕ ಭಾಗದ ವಕೀಲರನ್ನೇ ನಾಮ ನಿರ್ದೇಶನ ಮಾಡುವ ಮೂಲಕ ಈ ಭಾಗದ ವಕೀಲರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರಿಯಾಂಕ್ ಖರ್ಗೆ ಅವರು ಸಿಎಂ ಅವರನ್ನು ಆಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…