ವದಂತಿಗೆ ನಂಬೇಡಿ, ನಾನು ಬಿಜೆಪಿ ಬಿಡುವುದಿಲ್ಲ- ಶಾಸಕ ರಾಜೂಗೌಡ ಸ್ಪಷ್ಟನೆ

0
129

ಯಾದಗಿರಿ:  ಜಿಲ್ಲೆಯ ಸುರಪುರ  ಬಿಜೆಪಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರು ಆಪರೇಷನ್ ಹಸ್ತಕ್ಕೆ ಹೋಗುತ್ತಾರೆ ಎಂಬ ವದಂತಿ ಮಾಧ್ಯಮಗಳಲ್ಲಿ  ಹರಿದಾಡುತ್ತಿದ್ದು,  ಇದರ ಬಗ್ಗೆ ಸ್ವತಃ  ಶಾಸಕ  ರಾಜುಗೌಡ  ಸ್ಪಷ್ಟನೆ ನೀಡಿದ್ದಾರೆ.

ತಮ್ಮ ತಾಯಿಯ  ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇದ್ದೆ . ಈ ಕಾರಣಕ್ಕೆ  ಮೊಬೈಲ್ ಆಫ್ ಮಾಡಿದ್ದೆ. ಇದಕ್ಕಾಗಿ ನನ್ನ ಬಗ್ಗೆ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದು, ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ ಎಂದು ಅವರು ಇ ಮೀಡಿಯಾ ಜೊತೆ ಮಾತನಾಡಿ ತಿಳಿಸಿದ್ದಾರೆ.

Contact Your\'s Advertisement; 9902492681

ಆಸ್ಪತ್ರೆಯಲ್ಲಿ ಇದ್ದ ಕಾರಣ ನನ್ನ ಮೊಬೈಲ್ ಸ್ವಿಚ್ ಮಾಡಿದ್ದೆ. ಹೀಗಾಗಿ ಯಾರೂ ಅನುಮಾನ ಪಡುವ ಅವಶ್ಯಕತೆ ಇಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಬಿಜೆಪಿಯಲ್ಲೇ ಇರುತ್ತೇನೆ ಎಂದು ಕ್ಷೇತ್ರದ ಜನತೆಗೆ ಶಾಸಕ ರಾಜುಗೌಡ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here