ಶಿಕ್ಷಣದಿಂದ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆ ಸಾಧ್ಯ: ರಾಜು ಹಿರೇಮಠ

ಕಲಬುರಗಿ: ಶಿಕ್ಷಣದಿಂದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿ ಸಾದ್ಯ ಎಂದು ರಾಜ್ಯ ಬೇಡ ಜಂಗಮರ ಯುವ ಸಂಘಟನೆಯ ರಾಜ್ಯ ಮುಖಂಡ ರಾಜು ಎಮ್ ಹಿರೇಮಠ ಹೇಳಿದರು, ಅವರು ಆಳಂದ ತಾಲೂಕಿನ ಗುಂಜಬಬಲಾದ ಗ್ರಾಮದ ಜೈ ಭೀಮ ತರುಣ ಸಂಘವು ಹಮ್ಮಿಕೊಂಡಿದ್ದ ಡಾ ಬಿ.ಆರ್. ಅಂಬೇಡ್ಕರ ಅವರ ಮಾಹಾನಾಯಕ ಅಂಬೇಡ್ಕರ ಧಾರವಾಹಿಯ ಪೋಸ್ಟರನ ಉದ್ಟಾಟನಾ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ದಲಿತ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಯಾಗಬೇಕಾದರೆ ಮೊದಲು ಶಿಕ್ಷಣ ನಂತರ ಸಂಘಟನೆ ಜೊತೆಗೆ ಹೋರಾಟ ಅಗತ್ಯವಾಗಿದೆ, ಹೋರಾಟಗಳನ್ನು ಮಾಡುವಾಗ ಇತರರ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೋಬ್ಬರು ಹೋರಾಟ ಮಾಡುವ ಹಕ್ಕುಹೊಂದಿರುತ್ತಾರೆ, ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರೀಕರಿಗೂ ಹೋರಾಟ ಮಾಡುವ ಹಕ್ಕು ನೀಡಿದೆ ಆದರೆ ಆ ಹಕ್ಕು ಇತರರ ಹಕ್ಕುಗಳ ಮೇಲೆ ಕೆಟ್ಟ ಪರಿಣಾಮ ಬೀರಬಾರದು ಎಂಬ ನಿರ್ಭಂಧನೆಯೂ ಇದೆ ಇದನ್ನು ಪ್ರತಿಯೊಬ್ಬರು ಅರಿತು ಇತರರ ಹಕ್ಕುಗಳಿಗೆ ಧಕ್ಕೆಯಾಗದಂತೆ ತಮ್ಮ ತಮ್ಮ ಹಕ್ಕಿಗಾಗಿ ಕಾನೂನು ಬದ್ದ ಹೋರಾಟ ಮಾಡಲು ಮುಂದೆ ಬರಬೇಕು ಎಂದು ರಾಜು ಎಮ್ ಹಿರೇಮಠ ಅವರು ಕರೆಕೊಟ್ಟರು.

ಉಪನ್ಯಾಸಕರಾಗಿ ಆಗಮಿಸಿದ ಗೋರಖ ದೊಡ್ಮನಿ ಅವರು ಮಾತನಾಡಿ ಮಹಿಳೆಯರಿಗೆ ಶಿಕ್ಷಣದ ಹಕ್ಕು, ಯುವಕ ಯುವತಿಯರಿಗೆ ಮತಧಾನದ ಹಕ್ಕು ನೀಡಿರಿವಂತಹ ಬಾಬಾ ಸಾಹೇಬ ಅಂಬೇಡ್ಕರ ಅವರನ್ನು ಪ್ರತಿಯೊರು ಸ್ಮರಿಸಬೇಕೆಂದು ತಿಳಿಸಿದರು.

ಮುಖ್ಯ ಅಥಿತಿಯಾಗಿ ಆಗಮಿಸಿದ ಎಕ್ಸಿಕ್ಯೂಟಿವ ಇಂಜಿನಿಯರಿಂಗ ನಾಗಮೂರ್ತಿ ಅವರು ಮಾತನಾಡಿ ಎಲ್ಲ ಜನಾಂಗದ ಯುವಕರು ಮಹಿಳೆಯರು ಹಿರಿಯರು iಹಾನಾಯಕ ಅಂಬೇಡ್ಕರ ಎಂಬ ಧಾರವಾಹಿಯನ್ನು ನೋಡಬೇಕು, ಅದರಂತೆ ತಮ್ಮ ಮಕ್ಕಳನ್ನು ಬೆಳಸಬೇಕೆಂದು ಸಲಹೆ ನೀಡಿದರು.

ಮೊದಲಿಗೆ ಕಾರ್ಯಕ್ರಮವನ್ನು ಬಾಬಾ ಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಪರಮೇಶ್ವರ ಮಾಂಗ ಸ್ವಾಗತಿಸಿದರು, ಪರಮೇಶ್ವರ ಸಿಂಗೆ ನಿರೂಪಿಸಿದರು, ಶಿವಕೂಮಾರ ಸಿಂಗೆ ವಂದಿಸಿದರು, ಕಾರ್ಯಕ್ರಮದಲ್ಲಿ ಮಾಜಿ ತಾಲೂಕಾ ಪಂ ಸದಸ್ಯರಾದ ಲಕ್ಷ್ಮಿಪುತ್ರ ಯಂಕಂಚಿ, ದಲಿತ ಸಂಘಟನೆಯ ರಾಜ್ಯಾಧ್ಯಕ್ಷರಾದ ನಾಮದೇವ ಬಬಲಾದಕರ್, ನಿವೃತ್ತ ಪಿಎಸ್ ಐ ಶಿವಪ್ಪ ಬಬಲಾದಕರ, ಮಾಜಿ ಗ್ರಾ.ಪಂ ಸದಸ್ಯರಾದ ಮಾಹಾತೇಶ ಸಿಂಗೆ, ಶ್ರೀಶೈಲ ಗಂಗಾಧರ, ಸಚೀನ, ವಿಠಲ, ಶೇಟ್ಟೆಪ್ಪ ಮುತಾಂದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420