ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ಮುದುವತ್ತಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದ ಅಂಬೇಡ್ಕರ್ ವೃತ್ತ ಮುಂಭಾಗದಲ್ಲಿ ಮಹಾನಾಯಕ ಧಾರಾವಾಹಿಯ ಬೃಹತ್ತಾದ ಪ್ಲೆಕ್ಸ್ ಅಳವಡಿಸಲಾಗಿದೆ.
ಮುದುವತ್ತಿ ಗ್ರಾಮ ಪಂಚಾಯಿತಿಯ ಡಾ. ಬಿ.ಆರ್ ಅಂಬೇಡ್ಕರ್ ಮಹಿಳಾ ಸೇವಾ ಟ್ರಸ್ಟ್(ರಿ) ವತಿಯಿಂದ ಸಂಸ್ಥಾಪಕ ಮತ್ತು ಅದ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಶೋಭಾ ಹರೀಶ್ ಮತ್ತು ಉಪಸಂಸ್ಥಾಪಕರು ಕುಮಾರಿ ಡಾಕ್ಟರ್ ನೇತ್ರಾವತಿ ಕಾರ್ಯದರ್ಶಿಯಾದ ಶ್ರೀಮತಿ ಮಂಜುಳಾ, ಸದಸ್ಯರಾದ ಶ್ರೀಮತಿ ಶೋಭಾ, ಸುಷ್ಮಾ,ಮಮತಾ,ಆಶಾ, ಪವಿತ್ರ, ವಿಜಯಮ್ಮ, ವೆಂಕಟಲಕ್ಷ್ಮಮ್ಮ, ಮುದುವತ್ತಿ ಗ್ರಾಮ ಪಂಚಾಯಿತಿ ಸದಸ್ಯರಾದ ಮುನಿವೆಂಕಟಪ್ಪ, DSS ಕೇಶವಮೂರ್ತಿ ಸರ್ ಹಾಗೂ ಸುತ್ತಮುತ್ತಿನ ಹಳ್ಳಿಯ ಮುಖಂಡರ ನೇತೃತ್ವದಲ್ಲಿ ಈ ಮಹಾನಾಯಕ ಧಾರಾವಾಹಿಯ ಬೃಹತ್ ಪ್ಲೆಕ್ಸ್ ಇಡಲಾಗಿದೆ.
ಈ ಸಂದರ್ಭದಲ್ಲಿ ಬಿ.ಆರ್ ಅಂಬೇಡ್ಕರ್ ಮಹಿಳಾ ಸೇವಾ ಟ್ರಸ್ಟ್(ರಿ) ಸಂಸ್ಥಾಪಕ ಮತ್ತು ಅದ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಶೋಭಾ ಹರೀಶ್ ಮಾತನಾಡಿ ಜನರಿಗೆ ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ನಮ್ಮ ಗ್ರಾಮದಲ್ಲಿ ಇಂದು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜೊತೆಗೆ ನಮ್ಮ ಸಂವಿಧಾನ ಶಿಲ್ಪಿ, ಜನರ ಆರಾಧ್ಯ ದೈವ ಬಾಬಾ ಸಾಹೇಬರ ಜೀವನ ಚರಿತ್ರೆಯ ಬಗ್ಗೆ ತಿಳಿಸಲು ಅದರ ಜೊತೆಗೆ ಧಾರವಾಹಿಯನ್ನು ವೀಕ್ಷಿಸಲು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಬ್ಯಾನರ್ ಮಾಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಮಹಿಳಾ ಸೇವಾ ಟ್ರಸ್ಟ್ ನ ಉಪ ಸಂಸ್ಥಾಪಕರಾದ ಕುಮಾರಿ ಡಾ. ನೇತ್ರಾವತಿರವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಅವರು ಮಾತನಾಡಿ ಕೆಲವು ಕಿಡಿಗೇಡಿಗಳು ಜೀ ಕನ್ನಡ ವಾಹಿನಿಯ ರಾಘವೇಂದ್ರ ಹುಣಸೂರು ರವರಿಗೆ ಕರೆಯ ಮೂಲಕ ಮಹಾನಾಯಕ ಧಾರಾವಾಹಿಯನ್ನು ನಿಲ್ಲಿಸುವಂತೆ ಒತ್ತಡ ತರುತ್ತಿದ್ದಾರೆ, ಅಲ್ಲದೆ ಅವರಿಗೆ ಜೀವ ಬೆದರಿಕೆ ಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಯಾವುದೇ ಕಾರಣಕ್ಕೂ ಮಹನಾಯಕ ಧಾರಾವಾಹಿ ನಿಲ್ಲಿಸಬಾರದೆಂದು ಮನವಿ ಮಾಡಿದರು. ಜೊತೆಗೆ ರಾಘವೇಂದ್ರ ಹುಣಸೂರು ರವರ ಬೆನ್ನೆಲುಬಾಗಿ ನಾವು ಇರುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಬಿ.ಆರ್ ಅಂಬೇಡ್ಕರ್ ಮಹಿಳಾ ಸೇವಾ ಟ್ರಸ್ಟ್(ರಿ) ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…