ಕಲಬುರಗಿ: ವಯಸ್ಸಾದಂತೆ ನೆನಪಿನ ಶಕ್ತಿ ಕಳೆದುಕೊಂಡು ಮರೆವು ಆವರಿಸುವುದು ಸಹಜ. ವಾಯುವಿಹಾರ, ಯೋಗ, ಧ್ಯಾನ, ಪ್ರಾರ್ಥನೆ, ಸೂಕ್ತ ಆಹಾರ ಮತ್ತು ವಿಶ್ರಾಂತಿ ಪದ್ಧತಿ, ಸಕ್ಕರೆ ಸೇವನೆ ಮಾಡದಿರುವುದು, ಪ್ರಮಾಣ ಕಡಿಮೆಗೊಳಿಸುವುದು, ಮೆದುಳಿನ ಆರೋಗ್ಯ ರಕ್ಷಣೆ, ಒಂಟಿತನದಿಂದ ದೂರವಿರುವುದು, ಕುಟುಂಬ ಹಾಗೂ ಸಮಾಜದ ಸಕಾರಾತ್ಮಕ ಪ್ರಭಾವದ ಮುಂತಾದ ಮುಂಜಾಗ್ರತಾ ಕ್ರಮಗಳ ಮೂಲಕ ಮರೆವು ರೋಗದಿಂದ ದೂರವಿರಬಹುದಾಗಿದೆಯೆಂದು ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಹೇಳಿದರು.
ಅವರು ನಗರದ ಶೇಖರೋಜಾದಲ್ಲಿರುವ ಶಹಾಬಜಾರ ’ನಗರ ಪ್ರಾಥಮಿಕ ಆರೋಗ್ಯ ಕೇಂದ’ದಲ್ಲಿ ಸೋಮವಾರ ಏರ್ಪಡಿಸಿದ್ದ ’ವಿಶ್ವ ಮರೆವು ರೋಗ ದಿನಾಚರಣೆ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮರೆವು ಕಾಯಿಲೆಯವರು ಬಹುತೇಕವಾಗಿ ಯಾವುದೇ ವಿಷಯಗಳು, ವಸ್ತುಗಳನ್ನು ಮರೆತು ಬಿಡುತ್ತಾರೆ. ಅರಳು-ಮರಳಾಗಿ ವರ್ತಿಸುವುದು, ಜ್ಞಾಪಕ ಶಕ್ತಿ ಕುಂದುವುದು, ಮೆದುಳಿನ ಜೀವಕೋಶಗಳ ನಾಶ, ತಾರ್ಕಿಕ ಶಕ್ತಿ ನಾಶದಂತಹ ಲಕ್ಷಣಗಳು ಮರೆವು ರೋಗದ ಲಕ್ಷಣಗಳಾಗಿವೆ. ರೋಗಿಗಳನ್ನು ಕೀಳಾಗಿ ಕಾಣುವುದು ಬೇಡ. ಅವರ ಜೊತೆ ಆಪ್ತವಾಗಿ ವರ್ತಿಸಬೇಕು. ತಜ್ಞರ ಪ್ರಕಾರ ನೂರರಲ್ಲಿ ಇಬ್ಬರಿಗೆ ಕಾಡುವ ಕಾಯಿಲೆ ಇದಾಗಿದ್ದು, ಆರಂಭದಲ್ಲಿ ಇದರ ಲಕ್ಷಣಗಳನ್ನು ಗುರ್ತಿಸಿ, ಸೂಕ್ತ ಜೀವನಶೈಲಿಯ ಬದಲಾವಣೆಯ ಮೂಲಕ ಮರೆವು ಕಾಯಿಲೆ ಬರದಂತೆ ತಡೆಯಬಹುದಾಗಿದೆಯೆಂದರು.
ಕಾರ್ಯಕ್ರಮದಲ್ಲಿ ಎಚ್.ಬಿ.ಪಾಟೀಲ, ಸಮಾಜ ಸೇವಕ ಸುನೀಲಕುಮಾರ ವಂಟಿ, ಪ್ರಮುಖರಾದ ಬಸವರಾಜ ಎಸ್.ಪುರಾಣೆ, ಅಮರ ಜಿ.ಬಂಗರಗಿ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಜಗನಾಥ ಗುತ್ತೇದಾರ, ನಾಗೇಶ್ವರಿ, ಮಂಗಲಾ, ಶ್ರೀದೇವಿ, ಚಂದಮ್ಮ ಮರಾಠಾ, ಅರ್ಚನಾ ಸಿಂಗೆ, ಅನಿತಾ ಕಣಸೂರ, ಕಲ್ಯಾಣಿ ಹರಳಯ್ಯ, ಲಕ್ಷ್ಮೀ, ಸಂಗಮ್ಮ, ಅಣವೀರಯ್ಯ ಮಠಪತಿ ಸೇರಿದಂತೆ ಮತ್ತಿತರರಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…