ಸುರಪುರ: ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಸಂಘದ ಮುಖಂಡರು ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಸವರಾಜ ಹೊಸ್ಮನಿ ಮಾತನಾಡಿ,ಸರಕಾರ ದೇಶದಲ್ಲಿ ದಲಿತರು ತುಳಿಯುವ ಕೆಲಸ ಮಾಡುತ್ತಿದೆ.ಇದನ್ನು ಖಂಡಿಸುವುದಾಗಿ ನುಡಿದರು.ಅಲ್ಲದೆ ದಲಿತ ವಿರೋಧಿ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು,ದೌರ್ಜನ್ಯ ತಡೆ ಕಾಯ್ದೆ ಬಲಗೊಳಿಸಬೇಕು,ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು,ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು,ನ್ಯಾಯಮೂರ್ತಿಗಳಾದ ನಾಗಮೋಹನದಾಸ್ ಮತ್ತು ಸದಾಶಿವ ಆಯೋಗದ ವರದಿ ಬಹಿರಂಗಪಡಿಸಬೇಕು,ಮೀಸಲಾತಿ ಮತ್ತು ಬಡ್ತಿ ಮೀಸಲಾತಿಯಲ್ಲಿನ ಅನ್ಯಾಯ ಸರಿಪಡಿಸಬೇಕು,ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಉಪಯೋಜನೆ ಅಡಿಯ ಅನುದಾ ಸಮರ್ಪಕವಾಗಿ ಬಳಕೆಮಾಡಬೇಕು,ಭೂ ಒಡೆತನ ಮತ್ತು ಉದ್ಯೋಗಕ್ಕಾಗಿ ಸಲ್ಲಿಸಿರುವ ಎಲ್ಲಾ ಅರ್ಜಿಗಳ ಅನುದಾನ ಒದಗಿಸಬೇಕು,ಅಂಬೇಡ್ಕರ ಮತ್ತು ಇಂದಿರಾ ಆವಾಸ್ ಸೇರಿದಂತೆ ಎಲ್ಲಾ ಯೊಜನೆಗಳ ಅಡಿಯಲ್ಲಿ ಹಿತ್ತಲ ಮನೆಗಾಗಿ ೪ ಗುಂಟೆ ಜಾಗ ಮೀಸಲಿಡಬೇಕು ಹಾಗು ದೇವದಾಸಿ ಮಹಿಳೆಯರ ಮಾಸಿಕ ಸಹಾಯಧನ ಹೆಚ್ಚಳ ಕುಟುಂಬದ ಗಣತಿ ಮಾಡಿ ಪುನರ್ ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಅವರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಪ್ರಕಾಶ ಆಲ್ಹಾಳ ಸಮಾಜಿಕ ಕಾರ್ಯಕರ್ತ ಎಸ್.ಬಿ.ಹನ್ಸೂರ್ ಬಸವರಾಜ ಮಡಿವಾಳ ಶರಣಬಸವ ಕಾಂಬ್ಳೆ ಭೀಮವ್ವ ವೀರಾಬಾಯಿ ನಾಗಮ್ಮ ಎಸ್ ಈರಮ್ಮ ನಿಂಗಮ್ಮ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…