ರೇಲ್ವೆ ಖಾಸಗೀಕರಣ ವಿರೋಧಿಸಿ ಎಸಯುಸಿಐ(ಸಿ) ಪ್ರತಿಭಟನೆ

ಶಹಾಬಾದ:ಭಾರತಿಯ ರೇಲ್ವೆ ಜನಗಳ ಬೆವರಿಂದ ಕಟ್ಟಿದ್ದು ಜನಗಳ ಆಸ್ತಿಯಾಗಿದ್ದು, ಇದನ್ನು ಸರಕಾರ ಖಾಸಗೀಕರಣ ಮಾಡಬಾರದೆಂದು ಎಸಯುಸಿಐ(ಸಿ) ಪಕ್ಷದ ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ.ಎಸ್.ಇಬ್ರಾಹಿಂಪುರ ಹೇಳಿದರು.

ಅವರು ಸೋಮವಾರ ನಗರದ ರೈಲ್ವೆ ನಿಲ್ದಾಣದ ರೇಲ್ವೆ ಖಾಸಗೀಕರಣ ವಿರೋಧಿಸಿ ಎಸಯುಸಿಐ(ಸಿ) ಪಕ್ಷದ ವತಿಯಿಂದ ಆಯೋಜಿಸಲಾದ ಪ್ರತಿಭಟನೆಯಲ್ಲಿ ಮಾತನಾಡಿದರು. ರೇಲ್ವೆ ಸರಕಾರದ ದೊಡ್ಡ ಸಂಸ್ಥೆಯಾಗಿದ್ದು, ನೂರಾರು ಕೋಟಿ ರೂಪಾಯಿ ಆದಾಯ ಸರಕಾರಕ್ಕೆ ಬರುತ್ತಿದೆ.  ಆದರೆ ಸರಕಾರವು ಬಂಡವಾಳಶಾಹಿಯ ಹಿತಾಶಕ್ತಿಯ ಅನುಗುಣವಾಗಿ ಖಾಸಗೀಕರಣ ಮಾಡುತ್ತಿದೆ. ಕೂಡಲೇ ಸರಕಾರ ಈ ನೀತಿಯನ್ನು ಕೈ ಬಿಟ್ಟು ಜನರ ಜ್ವಾಲಂತ ಸಮಸ್ಯೆಗಳಾದ ನೀರುದ್ಯೋಗ, ಬಡತನದಂತಹ ಸಮಸ್ಯೆಗಳ ಕಡೆಗೆ ಗಮನ ಹರಿಸಿ ಪರಿಹರಿಸಬೇಕೆಂದರು.

ಎಸಯುಸಿಐ(ಸಿ) ಪಕ್ಷದ ಶಹಾಬಾದ ಕಾರ್ಯದರ್ಶಿ ಗಣಪತರಾವ.ಕೆ.ಮಾನೆ ಮಾತನಾಡಿ, 1992 ರಲ್ಲಿ ಗ್ಯಾಟ್ ಒಪ್ಪಂದ ಮಾಡಿಕೊಂಡು ಅಧಿಕಾರಕ್ಕೆ ಬಂದ ಎಲ್ಲಾ ರಾಜಕೀಯ ಪಕ್ಷಗಳು ಖಾಸಗೀಕರಣ,ಉದಾರೀಕರಣ ನೀತಿಗಳನ್ನು ಅನುಸರಿಸುತ್ತ ಎಲ್ಲಾ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿ ಮಾಲಿಕತ್ವಕ್ಕೆ ವಹಿಸುತ್ತಿದ್ದಾರೆ. ಕೋವಿಡ್ 19 ಸಂಕಷ್ಟದ ಪರಿಸ್ಥಿತಿಯಲ್ಲಿ ಬಡ ಜನರ ಬಗ್ಗೆ ಗಮನ ಕೊಡುವುದರ ಬದಲು ರೇಲ್ವೆ ಖಾಸಗೀಕರಣ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ರೈತ ವಿರೋಧಿ ಕೃಷಿ ಉತ್ಪನ್ನ ಮಸೂದೆಗಳಂತ ನೀತಿಗಳು ಜಾರಿ ಮಾಡುತ್ತಿರುವುದು ದುರಂತ. ಇದರ ವಿರುದ್ದ ಸಂಘಟಿತ ಹೋರಾಟ ಕಟ್ಟಬೇಕೆಂದು ಹೇಳಿದರು.

ಎಸಯುಸಿಐ(ಸಿ) ಪಕ್ಷದ ಸದಸ್ಯ ಜಗನ್ನಾಥ.ಎಸ್.ಹೆಚ್ ಅವರು ರೇಲ್ವೆ ಬಹುದೊಡ್ಡ ಸಂಸ್ಥೆಯಾಗಿ ಆಸ್ಪತ್ರೆ, ಶಾಲೆ ಒಳಗೊಂಡಿದೆ. ಇಂತಹ ಸಂಸ್ಥೆ ಖಾಸಗೀಕರಣ ಮಾಡುವುದನ್ನು ಸರಕಾರ ನಿಲ್ಲಿಸಬೇಕೆಂದರು.

ನಂತರ ರೈಲ್ವೆ ಸ್ಟೇಷನ್ ಮಾಸ್ಟರ್ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪಕ್ಷದ ಸದಸ್ಯೆ ಗುಂಡಮ್ಮ ಮಡಿವಾಳ, ರಾಜೆಂದ್ರ ಅತೂನೂರ, ಸಿದ್ದು ಚೌಧರಿ, ತಿಮ್ಮಯ್ಯಾ.ಬಿ.ಮಾನೆ, ನೀಲಕಂಠ.ಎಮ್.ಹುಲಿ,ತುಳಜರಾಮ.ಎನ್.ಕೆ, ಮಾಹಾದೇವಿ ಮಾನೆ, ರಾಧಿಕಾ ಚೌಧರಿ, ಶಿಲ್ಪಾ ಹುಲಿ, ರಮೇಶ ದೇವಕರ್,ಪ್ರವೀಣ್ ಬಣಿಮಿಕರ್,ರಘು.ಜಿ.ಮಾನೆ, ರಘು ಪವರ್, ವಿಶ್ವನಾಥ ಸಿಂಘೆ ಇತರರು ಇದ್ದರು.

emedia line

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420