ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ: ಸ್ಥಳಕ್ಕೆ ಶಶಿಕಲಾ ಟೆಂಗಳಿ ಭೇಟಿ

0
39

ಕಲಬುರಗಿ: ಟೆಂಗಳಿ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರವಾಹ ಉಂಟಾದ ಕಾರಣ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ ಆಗಿದ್ದಕ್ಕೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾ ಟೆಂಗಳಿ ಅವರು ಸ್ಥಳಕ್ಕೆ ಹೋಗಿ ವೀಕ್ಷಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಶಾಲೆಯಲ್ಲಿ ಗಂಜಿ ಕೇಂದ್ರವನ್ನು ತೆರೆದು ಸಂತ್ರಸ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು.

ಟೆಂಗಳಿ ಗ್ರಾಮದ ಸಣ್ಣ ಸೇತುವೆ ಹಾಳಾಗಿದ್ದು ಕೇಸು ಕೋರ್ಟಿನಲ್ಲಿದ್ದ ಅದರ ಬಗ್ಗೆ ಚರ್ಚಿಸಿ ತಕ್ಷಣವೇ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

Contact Your\'s Advertisement; 9902492681

ಗ್ರಾಮದ ಹನುಮಾನ್ ಮಂದಿರದಲ್ಲಿ ಸಮೃದ್ಧಿಯೋಜನೆಯ ಆಯ್ಕೆಯಾದ ಬೀದಿ ವ್ಯಾಪಾರಿಗಳಿಗೆ ತಲಾ ೧೦ ಸಾವಿರ ಅಂತೆ ೨೨ ಫಲಾನುಭವಿಗಳಿಗೆ ಪ್ರೋತ್ಸಾಹ ಧನದ ಪ್ರಮಾಣಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಸೇಡಂ ವಲಯ ಸಹಾಯಕ ಆಯುಕ್ತರು, ಕಾಳಗಿ ತಶೀಲ್ದಾರ್, ಟೆಂಗಳಿ ಗ್ರಾಮದ ಪಿಡಿಯೋ, ತಲಾಟಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here