ಸೇಡಂ: ಸತತ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಅಸ್ವಸ್ಥವಾಗುವುದಲ್ಲದೆ ಕೇಲವು ಗ್ರಾಮಗಳ ಮಳೆಯಿಂದ ರಸ್ತೆ ಸೇತುವೆ ಕಿತ್ತು ಹೋಗಿ ಗುಂಡಿಗಳು ನಿರ್ಮಾಣವಾಗಿದ್ದು, ಶಿಘ್ರವಾಗಿ ರಸ್ತೆ ದುರಸ್ತಿ ಹಾಗೂ ವಸತಿ ಯೋಜನೆಯ ಫಲಾನುಭವಿಗಳ ಹಣ ಬಿಡುಗಡೆ ಮಾಡಬೇಕೆಂದು ಅಗ್ರಹೀಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಸೇಡಂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವೇಳೆಯಲ್ಲಿ ಪಕ್ಷದ ಅಧ್ಯಕ್ಷರಾದ ರೇವಣಸಿದ್ದಪ್ಪ ಸಿಂಧೆ ಮಾತನಾಡಿ, ಮಳೆ ನೀರಿನಿಂದ ರಸ್ತೆ ಹದಗೆಟ್ಟಿರುವುದರಿಮದ ಸಾರ್ವಜನಿಕರಿಗೆ ಓಡಾಡಲು ಮತ್ತು ವಾಹನ ಅಪಘಾತಗಳು ಸಂಭವಿಸುತ್ತಿದೆ. ವಾರ್ಡ್ ಮಟ್ಟದಲ್ಲಿ ಪಾದಚಾರಿಗಳಿಗೆ ಓಡಾಡಲು ಪರದಾಡುತ್ತಿದ್ದಾರೆ ಆದರಿಂದ ಶಿಘ್ರವಾಗಿ ರಸ್ತೆ ದುರಸ್ತಿ ಮಾಡಲು ಮುಂದಾಗಬೇಕೆಂದು ಒತ್ತಾಯಿಸಿದರು.
ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಕೇಲವು ಫಲಾನುಭವಿಗಳ ಬಿಲ್ ಪಾವತಿಯಾಗದೆ ಮನೆಗಳು ಅರ್ಧಕ್ಕೆ ನಿಂತು ಹೋಗಿದ್ದು, ತಡೆಹಿಡಿದಿರುವ ಬಿಲ್ ಬೀಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ ಶಕಲಾಸಪಲ್ಲಿ, ಗೋಪಾಲ್ ಎಲ್ ಮೌರ್ಯ, ದೇವಿ ಶಂಕರ್ ,ಮುಂತಾದ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…