ಕಲಬುರಗಿ: ಆರೋಗ್ಯಕರ ಬದುಕನ್ನು ನಡೆಸಲು ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು,ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾದ ಚೇತನ್ ಗೋನಾಯಕ ರವರು ಅಭಿಪ್ರಾಯ ಪಟ್ಟರು.
ತಾಲೂಕಿನ ಶ್ರೀ ನಿವಾಸ ಸರಡಗಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಮಹೀಂದ್ರ ಫೈನಾನ್ಸ್ ಮತ್ತು ಮಹೀಂದ್ರ ರೂರಲ್ ಹೌಸಿಂಗ್ ಫೈನಾನ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಾವೆಲ್ಲಾ ವೃಕ್ಷ ಪ್ರೇಮಿಗಳಾಗಿ ಪರಿಸರ ರಕ್ಷಿಸಬೇಕು, ಜನರಲ್ಲಿ ಹಸಿರಿನ ಮಹತ್ವದ ಕುರಿತು ಜಾಗೃತಿ ಮೂಡಿಬೇಕು, ಮಹೀಂದ್ರ ಫೈನಾನ್ಸ್ ಅವರ ಈ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಿವರಾಜ್ ಕೊಳಕುರ್, ಸಂಜುಕುಮಾರ್ ನಿಲಂಗೆ, ವೀರಶೆಟ್ಟಿ, ಶ್ರವಣಕುಮಾರ ಔರದ್, ಅಮುಲ್ ಕಟಾಂಬಲೆ ಹಾಗು ಗ್ರಾಮದ ಮುಖಂಡರಾದ ಬಸ್ಸಯ್ಯ ಮಠಪತಿ, ಸಿದ್ದಯ್ಯ ಸ್ವಾಮಿ ಮೂಲಿಮನಿ, ಸಂಗಣ್ಣಗೌಡ ಸಿದಗುಂಡ್, ಅರುಣ್ ಗೋನಾಯಕ್, ನಾಗರಾಜ್ ಶ್ರೀಮನಿ, ರಶೀದ್ ಮುಲ್ಲಾ, ಶಿವಾನಂದ್ ಕಿಳ್ಳಿ ಮತ್ತು ಕಾರ್ಯಕ್ರಮ ಸಂಚಾಲಕರಾಗಿ ಶರಣು ಗೋನಾಯಕ್ ನೆರವೇರಿಸಿಕೊಟ್ಟರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…