ಬೆಂಗಳೂರು: ಸೋಂಕಿತ ಸರಕಾರ ಎಂದು ಬರೆಯಲಾದ ಮಾಸ್ಕ್ ಧರಿಸಿ ಅಧಿವೇಶನದಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದ ಕೆಪಿಸಿಸಿ ವಕ್ತಾರರಾದ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಅದೇ ಫೋಟೋ ಬಳಸಿ ಟ್ವಿಟ್ ಮಾಡುವ ಮೂಲಕ ಬಿಜೆಪಿ ಸರಕಾರದ ಒಟ್ಟಾರೆ ವೈಫಲ್ಯವನ್ನು ಟೀಕಿಸಿದ್ದಾರೆ.
“ಅಧಿವೇಶನದಲ್ಲಿ ಸಾಕಷ್ಟು ಮಾತನಾಡಲು ಅನುಮತಿ ನಿರಾಕರಿಸಿದ್ದರಿಂದ ವಿರೋಧಪಕ್ಷವಾದ ನಮಗೆ ಈ ರೀತಿ ಮಾಸ್ಕ್ ಧರಿಸಿ ಪ್ರತಿಭಟನೆ ಮಾಡುವ ಮೂಲಕ ನಿಮ್ಮ ಸಂದೇಶವನ್ನು ಆಡಳಿತ ಪಕ್ಷದವರಿಗೆ ತಲುಪಿಸುವುದೇ ಸರಿಯಾದ ಮಾರ್ಗವಾಗಿದೆ” ಎಂದು ಶಾಸಕ ಖರ್ಗೆ ಖಾರವಾಗಿ ಟ್ವಿಟ್ ಮಾಡಿದ್ದಾರೆ.
ಮುಂದುವರೆದ ಅವರು ” ದುರಾದೃಷ್ಟವೆಂದರೆ, ಮಾಸ್ಕ್ ಧರಿಸಿ ಕೊರೋನಾದಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು. ಆದರೆ, ಬಿಜೆಪಿ ಸರಕಾರದ ದುರಾಡಳಿತದಿಂದಲ್ಲ” ಎಂದು ಕುಟುಕಿದ್ದಾರೆ.
Since we aren’t allowed to speak much as the opposition,the best way to protest & get your message to the ruling party is by wearing a mask that says it all.Unfortunately the mask protects from #corona not from the misrule of @BJP4Karnataka Govt
#SonkitaSarkara / #ಸೋಂಕಿತ_ಸರಕಾರ pic.twitter.com/W5xWlZNV5X
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 24, 2020