ಕಲಬುರಗಿ: ಕೊರೋನಾ ನಿಯಂತ್ರಣಕ್ಕೆ ಇಂದು ಇಡೀ ಸರಕಾರ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಹಸ್ರಾರು ಕೊರೋನಾ ಯೋಧರು ತಮ್ಮ ಜೀವಪಣಕ್ಕಿಟ್ಟು ಅವಿರತ ಶ್ರಮದಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಸಚಿವ ಡಾ. ಸುಧಾಕರ್ ಅವರಿಗೆ ಕೆಪಿಸಿಸಿ ವಕ್ತಾರರಾದ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.
ನೀವು ತಟ್ಟೆ ಬಡಿಯಲು ಕೇಳಿದ್ದೀರಿ, ನಾವು ಮಾಡಿದೆವು. ನೀವು ದೀಪ ಬೆಳಗಿಸಿ ಎಂದಿರಿ, ನಾವು ಬೆಳಗಿಸಿದೆವು. ನೀವು ಮನೆಯಲ್ಲೇ ಇರಿ ಎಂದಿರಿ, ನಾವು ಇದ್ದೆವು. ನೀವು ಹೊರಗೆ ಬನ್ನಿ ಎಂದಿರಿ, ನಾವು ಬಂದೆವು. ನೀವು ಹೇಳಿದ ಎಲ್ಲವನ್ನೂ ನಾವು ಮಾಡಿದೆವು. 21 ದಿನಗಳಲ್ಲಿ ಈ ಯುದ್ದ ಮುಗಿಯಬೇಕಿತ್ತು ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯಭರಿತ ಟ್ವಿಟ್ ಮೂಲಕ ವೈದ್ಯಕೀಯ ಶಿಕ್ಷಣ ಸಚಿವರಿಗೆ ತಿರುಗೇಟು ನೀಡಿದ್ದಾರೆ.