ಯಾದಗಿರಿ: ಕಳೆದ ಮೂರು ದಿನಗಳಿಂದ ತೀವ್ರ ಸಂಚಲನ ಮೂಡಿಸಿದ್ದ ಸುರಪುರ ತಹಸೀಲ್ದಾರ್ ಬ್ಯಾಂಕ್ ಖಾತೆಯಿಂದ 75 ಲಕ್ಷಕ್ಕೂ ಅಧಿಕ ಹಣ ವಂಚನೆ ಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ತಹಸೀಲ್ ಕಚೇರಿಯ ಸಹಾಯಕ ಸಿ.ಎಸ್.ರಾಜು ಎನ್ನುವವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಯಾದಗಿರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ತಹಸೀಲ್ ಕಚೇರಿಯಲ್ಲಿ ನೈಸರ್ಗಿಕ ವಿಕೋಪದ ಪ್ರಕರಣಗಳ ಕುರಿತು ಕರ್ತವ್ಯ ನಿರ್ವಹಿಸಲು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸಿ.ಎಸ್.ರಾಜು ಎನ್ನುವವರನ್ನು ನೇಮಿಸಲಾಗಿದ್ದು, ಸಿ.ಎಸ್.ರಾಜು ಕರ್ತವ್ಯ ಲೋಪದಿಂದಾಗಿ ಜೂನ್ 1 ರಂದು ತಹಸೀಲ್ದಾರ್ ಸುರಪುರ ಬ್ಯಾಂಕ್ ಖಾತೆಯಿಂದ 75 ಲಕ್ಷಕ್ಕೂ ಅಧಿಕ ಹಣ ವಂಚನೆ ನಡೆದಿದೆ.
ಈ ಪ್ರಕರಣಕ್ಕೆ ಮೂಲವಾಗಿರುವ ಚೆಕ್ ಪ್ರತಿಯನ್ನು ಎಕ್ಸಿಸ್ ಬ್ಯಾಂಕಲ್ಲಿ ಕೆಲಸ ಮಾಡುವ ವಿಜಯಕುಮಾರ್ ಚೌದ್ರಿ ಎಂಬುವವನು ಕದ್ದು ತೆಗೆದುಕೊಂಡರು ಸಿ.ಎಸ್.ರಾಜು ಮೂರು ತಿಂಗಳಾದರು ನೋಡದಿರುವುದು ಹಾಗೂ ಕಳೆದ ಮೂರು ತಿಂಗಳಿಂದ ತಹಸೀಲ್ದಾರ್ ಸುರಪುರ ಬ್ಯಾಂಕ್ ಖಾತೆಯ ವ್ಮವಹಾರದ ವಿವರವನ್ನು ಬ್ಯಾಂಕ್ನಿಂದ ಪಡೆದು ಪುಸ್ತಕದಲ್ಲಿ ದಾಖಲಿಸುದಾಗಲಿ ಹಾಗು ತಹಸೀಲ್ದಾರರ ಗಮನಕ್ಕೆ ತರದೇ ಕರ್ತವ್ಯಲೋಪ ಎಸಗಿರುವುದಕ್ಕಾಗಿ ಸಿ.ಎಸ್.ರಾಜು ಎಂಬುವವರನ್ನು ಅಮಾನತ್ತು ಮಾಡಿರುವುದಾಗಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…