ರಾಯಚೂರು: ಎಪಿಎಂಸಿ ಕಾಯಿದೆ,ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಿ.೨೮ ರಂದು ರಾಜ್ಯಬಂದ್ ಗೆ ಕರೆ ನೀಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ (ಕೋಡಿಹಳ್ಳಿ)ದ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ಹೇಳಿದರು.
ಅವರಿಂದು ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸರ್ಕಾರ ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ. ಈ ಹಿಂದಿನ ಸರಕಾರಗಳು ರೈತರಿಗೆ ಉಪಯೋಗವಾಗುವ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಆದರೆ ಈಗಿನ ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿಗೆ ತರುವ ಮೂಲಕ ರೈತರನ್ನು ದಿವಾಳಿಯನ್ನಾಗಿ ಮಾಡುತ್ತಿದ್ದು ಎಂದು ಆರೋಪಿಸಿದರು.
ಲಾಕ್ ಡೌನ್ ವೇಳೆ ರೈತರು ಅನೇಕ ಕಷ್ಟ ಗಳನ್ನು ಅನುಭವಿಸಿದ್ದರು, ಸರ್ಕಾರ ನೆರವಿಗೆ ಬರಲಿಲ್ಲ, ಜನ ಊಟಕ್ಕೆ ಪರದಾಡಿದರು.ಇದೀಗ ಸರ್ಕಾರ ಮನ ಬಂದತೆ ಕಾಯ್ದೆ ಯನ್ನ ಜಾರಿಗೆ ತರಲು ಹೊರಟಿರುವುದನ್ನ ಖಂಡಿಸಿದರು.
ಸಾವಿರಾರು ಖಾಸಗಿ ಕಂಪನಿಗಳಿಗೆ ತಾಜ್ಯಕ್ಕೆ ಕಾಲಿಡುತ್ತಿದ್ದು,ಇದರಿಂದ ರೈತರು ದಿವಾಳಿಯನ್ನಾಗಿ ಮಾಡಲಿದ್ದಾರೆ ಎಂದರು.
ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ಕಾಯ್ದೆಗಳಾದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುದಾರಣೆ ತಿದ್ದುಪಡಿ ಅಗತ್ಯ ವಸ್ತುಗಳ ಕಾಯ್ದೆಗಳ ವಿರೋಧಿಸಲಾಗುವುದು. ಇದೇ 28 ರಂದು ರಾಜ್ಯ ಬಂದ್ ಕರೆ ನೀಡಿದೆ ಎಲ್ಲಾ ವರ್ತಕರು ಅಂಗಡಿಗಳ ಮಾಲೀಕರ ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಿಎಚ್ ರವಿಕುಮಾರ್ ಮಲ್ಲಿಕಾರ್ಜುನ ರೆಡ್ಡಿ ಗಂಗಪ್ಪ ಏಗನೂರು ವೆಂಕಟೇಶ, ನರಸಪ್ಪ, ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…