ರೈತ ,ದಲಿತ ,ಮತ್ತು ಕಾರ್ಮಿಕ ವಿರೋಧಿ ನೀತಿ ಜಾರಿಗೊಳಿಸುವುದನ್ನು ಖಂಡಿಸಿ ಪ್ರತಿಭಟನೆ

ರಾಯಚೂರು: ಕರೋನಾ ವೈರಸ್ ನಿಂದ ಇಡೀ ಸಮಾಜ ಮತ್ತು ರೈತರು ಆತಂಕದಲ್ಲಿ ಇರುವಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ , ದಲಿತ , ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದರು.

ನಗರದ ಟಿಪ್ಪುಸುಲ್ತಾನ ಉದ್ಯಾ‌ನದಲ್ಲಿ ಪ್ರತಿಭಟನೆ ಧರಣಿ ನಡೆಸಿ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಪರಿಹಾರ ಕೈಗೊಳ್ಳಬೇಕು, ಇದುವರೆಗೆ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯಲ್ಲಿ ಪ್ರೀಮಿ ಯಮ್ ಹಣ ತುಂಬಿದ ಎಲ್ಲಾ ರೈತರಿಗೆ ಪರಿಹಾರದ ಹಣ ರೈತರ ಖಾತೆಗೆ ಜಮಾ ಮಾಡಬೇಕು. ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆ ಹದಗೆಟ್ಟಿದ್ದು ಕೂಡಲೇ ಸರ್ಕಾರ ನಿಗದಿ ಪಡಿಸಿದ ಕೃಷಿ ಪಂಪಸೆಟ್ಟಗಳಿಗೆ 7 ತಾಸು ಬದಲಿಗೆ 10 ತಾಸು ವಿದ್ಯುತ್ ಪೂರೈಸಬೇಕು ಎಂದರು.

ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ಸಜ್ಜೆ ಹಾಗೂ ಇನ್ನಿತರ ಬೆಳೆಗಳು ಕಟಾವಿಗೆ ಬಂದಿದ್ದು ಮುಕ್ತ ಮಾರುಕಟ್ಟೆಯಲ್ಲಿ ತೀರ್ವ ಧರ ಕುಸಿದಿದೆ, ಕೂಡಲೇ ಬೆಂಬಲ ಬೆಲೆಗೆ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಬೇಕು. ಇತ್ತೀಚೆಗೆ ಬಿದ್ದ ಮುಂಗಾರು ಮಳೆಯಿಂದ ಜಿಲ್ಲೆಯ ಬಹುತೇಕ ರಸ್ತೆಗಳು ಹಾಳಾಗಿದ್ದು ಕೂಡಲೇ ದುರಸ್ತಿ ಗೊಳಿಬೇಕು. ಸಿರವಾರ ತಾಲೂಕಿನ ವಡವಟ್ಟಿ ಕ್ರಾಸ್ ನಿಂದ ಕಸಂದೊಡ್ಡಿ ಮತ್ತು ಗೊಲ್ಲದಿನ್ನಿ ಕ್ರಾಸನಿಂದ ಹಿರೇಬಾದರದಿನ್ನಿವರೆಗೆ ಹಾಗೂ ಮಾನ್ವಿ ತಾಲೂಕಿನ ಜಾನೇಕಲ್ ನಿಂದ ಆರ್.ಜಿ. ರೋಡವರಗೆ ರಸ್ತೆ ದೂರ ಹದಗೆಟ್ಟಿದ್ದು ಕೂಡಲೇ ವ್ಯವಸ್ಥೆ ಕೈಗೊಳ್ಳಬೇಕು ಎಂದು ತಿಳಿಸಿದರು.

ನಾರಾಯಣಪುರ ಬಲದಂಡೆ ನಾಲೆಯ 9 ಎ ಕಾಲುವೆ ನಿರ್ಮಾಣಕ್ಕಾಗಿ ಕುರುಕುಂದಿ ಮತ್ತು ಇನ್ನಿತರ ಗ್ರಾಮಗಳ ಸ್ವಾಧೀನಪಡಿಸಿಕೊಂಡ ಭೂಮಿಗಳಿಗೆ ಪರಿಹಾರ ಹಣ ಕೂಡಲೇ ನೀಡಬೇಕು. ಹಟ್ಟಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಸ್ಥಾಪಿಸಬೇಕು. ಹಿಂಗಾರು ಹಂಗಾಮಿಗೆ ಬೇಕಾದ ಎಲ್ಲಾ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡಬೇಕು, ಮಾನ್ವಿ ತಾಲೂಕಿನಲ್ಲಿ 32 ಸಾವಿರ ಹೆಕ್ಟೇರ್ ಹತ್ತಿ ಪ್ರದೇಶವಿದ್ದು ಸಿ.ಸಿ.ಟಿ. ಹತ್ತಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು. ನೆರೆ ಹಾವಳಿಯಿಂದ ಹೋದ ವರ್ಷ ಮತ್ತು ಈ ವರ್ಷ ಹಾನಿಗೊಳ ಗಾದ ರೈತರಿಗೆ ಪರಿಹಾರ ಹಣ ನೀಡಬೇಕು. ಮಾನ್ವಿ ಸಿರವಾರ ತಾಲೂಕಗಳ ತುಂಗಭದ್ರಾ ಎಡದಂಡೆ ನಾಲೆಯ ಕೊನೆಭಾಗದವರೆಗೆ ಸಮರ್ಪಕವಾಗಿ ನೀರನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸೂಗುರಯ್ಯ ಆರ್.ಎಸ್.ಮಠ,ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್, ಯಂಕಪ್ಪ ಕಾರಬಾರಿ, ದೊಡ್ಡಬಸನಗೌಡ ಬಲ್ಲಟಗಿ, ಬಸವರಾಜ ಮಲ್ಲಿನಮಡು, ಲಿಂಗಾರೆಡ್ಡಿ ಪಾಟೀಲ್, ನರಸಪ್ಪ ಯಾದವ್, ವೀರೇಶ ಕಂಬಳಿ, ಪ್ರಭಾಕರ, ಬೆಂದಾವಲಿ ಸಾಬ್,ಕುಪ್ಪಣ್ಣ ಗೋನಟ್ಟಿ, ಮಲ್ಲನಗೌಡ ದಿದ್ದಿ,ಹುಸೇನ್ ಸಾಬ್ ರಾಮನಗೌಡ ಗಣೇಕಲ್, ಜಯಕುಮಾರ, ಹುಲಿಗಯ್ಯ, ದೊಡ್ಡಬಸವ ನಾಯಕ, ಭೀಮೇಶ್ವರ ರಾವ್, ವೆಂಕಟರೆಡ್ಡಿ ರಾಜಲಬಂಡಾ, ಶಂಕ್ರಪ್ಪ ಗೌಡ ದೇವತಗಲ್, ಮಲ್ಲನಗೌಡ ದೇವತಗಲ್, ಬೂದಯ್ಯಸ್ವಾಮಿ ಹುಚ್ಚರೆಡ್ಡಿ ಸೇರಿದಂತೆ ಅನೇಕರು ಇದ್ದರು.

ವರದಿ: ಮುತ್ತಣ್ಣ ರಾಯಚೂರು

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420