28ಕ್ಕೆ ಕರ್ನಾಟಕ ಬಂದ್ ಗೆ ಕರವೇ ಬೆಂಬಲ

0
35

ಕಲಬುರಗಿ: ಭೂ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯ ಕೆಲ ನಿರ್ಣಯಗಳು ರೈತ ವಿರೋಧಿ ಯಾಗಿದೆ. ಅವುಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಅನೇಕ ವಿಧೇಯಕಗಳ ವಿರುದ್ಧ ರೈತರು ಇದೇ 28 ನೀಡಿರುವ ಬಂದಗೆ ಕರವೇ (ಪ್ರವೀಣ ಶೆಟ್ಟಿ) ಬಣದ ನೇತೃತ್ವದಲ್ಲಿ ಸಂಪೂರ್ಣ ಬೆಂಬಲ ನೀಡಿ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ ನಾಟೀಕಾರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು ಮಳೆಹಾನಿ, ಪ್ರಕೃತಿ ವಿಕೋಪಗಳಿಂದ ರೈತನ ಬೆಳೆಹಾನಿ ಒಂದೆಡೆಯಾದರೆ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ತೀವ್ರ ಸಂಕಷ್ಷಟದಲ್ಲಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನುಗಳನ್ನು ರೂಪಿಸುವ ಮೂಲಕ ರೈತರನ್ನು ಮುಗಿಸಲು ಹೊರಟಿವೆ ಎಂದರು.

Contact Your\'s Advertisement; 9902492681

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾಯಿದೆಯಂತಹ, ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹಾಗೂ ರೈತರು ಬೆಳೆದ ಬೆಂಬಲ ಬೆಲೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ಸೆ.28 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರವೇ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here