ಬೆಂಗಳೂರು: ಸಂಗೀತ ಮಾಂತ್ರಿಕ, ಸ್ವರಸ್ವತಿ ಪುತ್ರ, ಗಾಯನ ಲೋಕದ ಭೀಷ್ಮ ಡಾ.ಎಸ್.ಪಿ.ಬಾಲಸುಬ್ರಹ್ಮಣಂ ಅವರು ಇಹಲೋಕ ತ್ಯಜಿಸಿದ್ದು ಅತ್ಯಂತ ದುಃಖದ ವಿಷಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಭಾರತದ ಸುಮಾರು 16 ಭಾಷೆಗಳ ಗಾಯನ ಕ್ಷೇತ್ರದಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಛಾಪು ಮೂಡಿಸಿದ್ದ ಎಸ್.ಪಿ.ಬಿ. 50 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿ ಚಿತ್ರರಸಿಕರ ಮನಸೂರೆಗೊಂಡವರು. ಕನ್ನಡ ಚಲನಚಿತ್ರ ಕ್ಷೇತ್ರದಲ್ಲೂ ತಮ್ಮ ಧ್ವನಿ ಮಾಧುರ್ಯ ಹಂಚುವ ಮೂಲಕ ಕನ್ನಡದ ಹೆಮ್ಮೆಯಾಗಿದ್ದವರು. ನನ್ನ ನಿರ್ದೇಶನದ ಮೈಸೂರು ಮಲ್ಲಿಗೆ, ನೆನಪಿನ ದೋಣಿ, ನೀಲಾ, ನಮ್ಮೆಜಮಾನ್ರು ಸಿನಿಮಾ ಸೇರಿದಂತೆ ಸುಮಾರು 15 ಸಿನಿಮಾಗಳಲ್ಲಿ ಒಟ್ಟು 60 ಗೀತೆಗಳನ್ನು ಹಾಡುವ ಮೂಲಕ ಸಿನಿಮಾದ ಗೆಲುವಿಗೆ ಹೆಗಲಾದವರು ಎಂದು ಸ್ಮರಿಸಿದ್ದಾರೆ.
ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ ಎಸ್.ಪಿ.ಬಿ. ಅವರು ನಟನೆ, ಸಂಗೀತ ಸಂಯೋಜನೆ, ರಸಸಂಜೆ ಕಾರ್ಯಕ್ರಮ ಸೇರಿದಂತೆ ಬಹುಮುಖ ಪ್ರತಿಭೆಯಾಗಿ ಅಭಿಮಾನಿಗಳ ಮನಗೆದ್ದಿದ್ದ ಅದ್ವಿತೀಯ ಸಾಧಕ ಎಂದು ಬಣ್ಣಿಸಿದ್ದಾರೆ.
ಕಳೆದ ಒಂದೂವರೆ ತಿಂಗಳಿಂದ ಕೊರೋನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಿ.ಅವರು ಮರಳಿ ಬರುತ್ತಾರೆ ಎಂಬ ಆಶಯವಿತ್ತು. ಆದರೆ ವಿಧಿಲಿಖಿತ ಬೇರೆಯದೇ ಆಗಿ, ಬಾರದ ಲೋಕಕ್ಕೆ ಹೋಗಿರುವುದು ದುರ್ದೈವ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕುಟುಂಬ ವರ್ಗಕ್ಕೆ, ಆಪ್ತರು ಮತ್ತು ಕೊಟ್ಯಾಂತರ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…