ಕೋವಿಡ್ 4.8 ಸಾವಿರ ಕೋಟಿ ವೆಚ್ಚ: ತುರ್ತು ವೆಚ್ಚಕ್ಕಾಗಿ 500 ಕೋಟಿಗೆ ಹೆಚ್ಚಳ:  ಜೆ.ಸಿ ಮಾಧುಸ್ವಾಮಿ

ಬೆಂಗಳೂರು: ಕೋವಿಡ್-19 ರ ಸಂದರ್ಭದಲ್ಲಿ 4 ಸಾವಿರದ 800 ಕೋಟಿ ವೆಚ್ಚವಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಮುಖ್ಯ ಮಂತ್ರಿಗಳ ಪರವಾಗಿ 2020ನೇ ಸಾಲಿನ “ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕ” ವನ್ನು ಪ್ರಸ್ತಾವನೆಗೆ ಸಲ್ಲಿಸಿದ ಸಚಿವರು ಕೋವಿಡ್-19 ಸಂದರ್ಭದಲ್ಲಿ ಆಟೋ ರಿಕ್ಷಾ ಚಾಲಕರಿಗೆ, ಮಡಿವಾಳರಿಗೆ, ದಿನಗೂಲಿ ಇಲ್ಲದ ಕಾರ್ಮಿಕರಿಗೆ, ಬೀದಿ ವ್ಯಾಪಾರಿಗಳಿಗೆ ಸಹಾಯ ಧನ ಒದಗಿಸಲು, ವೈದ್ಯಕೀಯ ಸಲಕರಣೆಗಾಗಿ, ಲಾಕ್ ಡೌನ್ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ. / ಬಿ.ಎಂ.ಟಿ.ಸಿ ನೌಕಕರಿಗೆ ವೇತನ ಪಾವತಿಸಲು, ಕೃಷಿ ಪರಿಕರಗಳಿಗೆ, ಬೀಜ ಖರೀದಿಸಲು, ಅಂಗನವಾಡಿಗೆ, ವಾರ್ತಾ ಇಲಾಖೆಯ ಜಾಹೀರಾತು ವೆಚ್ಚ ಭರಿಸಲು ಹಾಗೂ ಇತರ ವೆಚ್ಚಗಳಿಗಾಗಿ ಭರಿಸಲಾಗಿದೆ ಎಂದು ವಿವರಣೆ ನೀಡಿದ ನಂತರ ಪ್ರಸ್ತಾವನೆಯನ್ನು ಅಂಗೀಕರಿಸಿದರು.

ಹಲವು ವಿಧೇಯಕಗಳ ಅಂಗೀಕಾರ: 2020ನೇ ಸಾಲಿನ “ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ ” ಮತ್ತು 2020ನೇ ಸಾಲಿನ “ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ ” ವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ  ಪ್ರಸ್ತಾವನೆಯನ್ನು ಸದನವು ಅಂಗೀಕರಿಸಿ ವಿಧೇಯಕಕ್ಕೆ ಅನುಮೋದನೆ ನೀಡಿತು

ತುರ್ತು ವೆಚ್ಚಕ್ಕಾಗಿ 85 ರಿಂದ 500 ಕೋಟಿಗೆ ಹೆಚ್ಚಳ : ತುರ್ತು ಸಂದರ್ಭದಲ್ಲಿ ಸಾದಿಲ್ವಾರು ನಿಧಿಯಲ್ಲಿ ವೆಚ್ಚ ಮಾಡಲು ಈವರೆಗೆ 85 ಕೋಟಿ ಇದ್ದ ಮೊತ್ತವನ್ನು 500 ಕೋಟಿಗೆ ಹೆಚ್ಚಳ ಮಾಡಲಾಗುವುದು ಎಂದು  ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿ ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ) ವಿಧೇಯಕ” ವನ್ನು ಪ್ರಸ್ತಾವನೆಗೆ ಸಲ್ಲಿಸಿ ಮಾತಾನಾಡಿದ ಅವರು 1985 ರಿಂದ 85 ಕೋಟಿ ನಿಗದಿಯಾಗಿತ್ತು ಆಗ ಬಜೆಟ್‍ನ ಗ್ರಾತ್ರ 2,380 ಕೋಟಿ ಇತ್ತು ಈಗ ಬಜೆಟ್‍ನ ಗಾತ್ರ 2.44 ಲಕ್ಷ ಕೋಟಿ ಇರುವುದರಿಂದ ಹೆಚ್ಚಿಸಬೇಕೆಂದು ವಿವರಣೆ ನೀಡಿದರು.

emedialine

Recent Posts

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

4 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

17 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

20 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

24 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420