ಕಲಬುರಗಿ: ಬೆಂಬಿಡದೆ ಜಿಲ್ಲೆಯಾದ್ಯಂತ ತಡರಾತ್ರಿ ಸುರಿದ ದಾರಾಕಾರ ಮಳೆಯಿಂದಾಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿಯ ಅಲೆಮಾರಿ ಸಮುದಾಯದ ಹೆಳವ ಜನಾಂಗದ ಬಡಾವಣೆಗೆ ಮಳೆ ನೀರು ನುಗ್ಗಿದ್ದು ನೂರಾರು ಕುಟುಂಬಗಳ ಜೀವನ ಅಸ್ತವ್ಯಸ್ತವಾಗಿದೆ.
ಈ ಹಿಂದೆ 2015 ರಲ್ಲಿ ಸರ್ಕಾರ ಗುರುತಿಸಿದ 2 ಎಕರೆ 20 ಗುಂಟೆ ಜಾಗದಲ್ಲಿ 51 ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. 2015ರಲ್ಲಿ ಚಿತ್ತಾಪುರ ಶಾಸಕರಾದ ಪ್ರಿಯಾಂಕ ಖರ್ಗೆಯವರು ಬೇಟಿ ನೀಡಿ ಹೆಳವ ಸಮುದಾಯದ ಜನರಿಗೆ ಸಮಾಜದ ಕಾಲೋನಿ ನಿರ್ಮಿಸಲು ಹಕ್ಕುಪತ್ರಗಳನ್ನು ನೀಡಿದ್ದಾರೆ.
ಆದರೆ ಈ ಕಾಲೋನಿಯ ಪಕ್ಕದಲ್ಲಿಯೇ ಕೆರೆ ಇರುವುದರಿಂದ, ಕೆರೆಗೆ ತಡೆಗೋಡೆ ನಿರ್ಮಿಸದಿರುವ ಕಾರಣ, ಕೆರೆ ತುಂಬಿ ಅಲೆಮಾರಿ ಕಾಲೋನಿಗೆ ನೀರು ನುಗ್ಗಿದ್ದು ಸುಮಾರು 25 ಮನೆಗಳು ಸದ್ಯ ನೀರಿನಲ್ಲಿ ಮುಳುಗಿವೆ. ರಸ್ತೆಗಳೆಲ್ಲ ಜಲಾವೃತಗೊಂಡು, ಮನೆಯಲ್ಲಿರುವ ದವಸಧಾನ್ಯಗಳು ಮತ್ತು ಇನ್ನಿತರ ವಸ್ತುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ.
ಈ ಕಾಲೋನಿಯಲ್ಲಿ ಮಕ್ಕಳು, ವಯೋವೃದ್ಧರು ಸೇರಿದಂತೆ ಸರಿಸುಮಾರು 300 ಜನ ವಾಸಿಸುತ್ತಿದ್ದು ಮಳೆತಂದ ಅವಾಂತರದಿಂದಾಗಿ ಹೇಳವ ಸಮಾಜದವರ ಬದುಕು ಅತಂತ್ರ ಸ್ಥಿತಿಯಲ್ಲಿದೆ.
ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಜನಪ್ರತಿನಿಧಿಗಳು ಇಲ್ಲಿನ ಅಲೆಮಾರಿ ಹೆಳವ ಸಮಾಜದ ನಿವಾಸಿಗಳಿಗೆ ಅನುಕೂಲ ಮಾಡಿಕೊಡುವಂತೆ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ನಿರ್ದೇಶಕರಾದ ಬಸವರಾಜ ಹೆಳವರ ಯಾಳಗಿ ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…