ಧಾರಾಕಾರ ಸುರಿದ ಮಳೆಗೆ ಉಕ್ಕಿ ಹರಿದ ನದಿ- ಹಳ್ಳ-ಕೊಳ್ಳಗಳು

ಶಹಾಬಾದ: ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು, ಹೊಳೆ-ನದಿಗಳು ಉಕ್ಕಿ ಹರಿದ ಪರಿಣಾಮ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಶಂಕರವಾಡಿಯ ಕಾಗಿಣಾ ಸೇತುವೆ ಕಟ್ಟಲಾದ ಬ್ರಿಡ್ಜ ಕಮ್ ಬ್ಯಾರೇಜ ಸಂಪೂರ್ಣ ಮುಳುಗಡೆಯಾಗಿದೆ.ಅಲ್ಲದೇ ಭಂಕೂರ ಮುತ್ತಗಾ ರಸ್ತೆಯ ಮಧ್ಯದ ಸೇತುವೆ ಹಾಗೂ ಮುತ್ತಗಾದಿಂದ ಕದ್ದರಗಿ ಹೋಗುವ ಮಧ್ಯದ ಬ್ರಿಡ್ಜ್ ಕಮ್ ಬ್ಯಾರೇಜ ಮುಳುಗಡೆಯಾಗಿದ್ದು, ಸಂಪೂರ್ಣ ಜನಸಂಚಾರ ಕಡಿತಗೊಂಡಿದೆ.ಮುತ್ತಗಾ ಗ್ರಾಮಕ್ಕೆ ಹಾಗೂ ಮುತ್ತಗಾ ಗ್ರಾಮಸ್ಥರು ಬೇರೆ ಊರಿಗೆ ಹೋಗಬೇಕಾದರೆ ಪೇಠಸಿರೂರ-ಕಾಟಮ್ಮದೇವರಹಳ್ಳಿ ದೂರದ ಮಾರ್ಗವಾಗಿ ಸಂಚರಿಸಬೇಕಾಗಿದೆ.ಈ ಮಾರ್ಗ ಬಿಟ್ಟರೇ ಎಲ್ಲಾ ಕಡೆ ನೀರು ಆವರಿಸಿದೆ.

ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶದ ಹೊಲಗಲ್ಲಿ ಅಪಾರ ಪ್ರಮಾಣದ ನೀರು ಆವರಿಸಿಕೊಂಡಿದ್ದರಿಂದ ನಗರದ ಸಾವಿರಾರು ಜನರು ಈ ದೃಶ್ಯವನ್ನು ನೋಡಲು ಕಿಕ್ಕಿರಿದು ನಿಂತಿದ್ದರು. ಈ ಸಂದರ್ಭದಲ್ಲಿ ಯಾವುದೇ ಹಾನಿಯಾಗದಂತೆ ಮುಜಾಗ್ರತೆ ಕ್ರಮವಾಗಿ ನಗರದ ಪೊಲೀಸರು ಶಹಾಬಾದ-ಚಿತ್ತಾಪೂರ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿ ಯಾವುದೇ ವಾಹನಗಳನ್ನು ಹೋಗದಂತೆ ತಡೆದಿದ್ದಾರೆ. ಅತ್ತ ಮಳಖೇಡದ ಕಾಗಿಣಾ ಸೇತುವೆ ಮುಳಗಡೆಯಾಗಿ ಸಂಚಾರ ವ್ಯವಸ್ಥೆ ಕಡಿತಗೊಂಡ ಪರಿಣಾಮ ಬಹುತೇಖ ವಾಹನಗಳು ಶಹಾಬಾದ ಮಾರ್ಗವಾಗಿ ಹೊರಡಿದವು. ನಗರದ ವಾಡಿ ವೃತ್ತದಿಂದ ಕಲಬುರಗಿ ಹಾಗೂ ಜೇವರ್ಗಿ ರಸ್ತೆಯ ಮೇಲೆ ನೂರಾರು ವಾಹನಗಳು ಸಾಲುಗಟ್ಟಿ ಹೋಗುತ್ತಿರುವುದು ಕಂಡು ಬಂದಿತು.

ಬೆಳೆ ಹಾನಿ : ಬೆಣ್ಣೆತೊರೆ ಜಲಾಶಯದಿಂದ ಹರಿಬಿಟ್ಟಿರುವ ಅಪಾರ ಪ್ರಮಾಣದ ನೀರು ನದಿ ಪಾತ್ರದ ಸುಮಾರು ಸಾವಿರಾರು ಎಕೆರೆ ಹೊಲಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈಗಾಗಲೇ ಸತತ ಸುರಿದ ಮಳೆಯಿಂದ ಅಲ್ಪಸ್ವಲ್ಪ ಹಾನಿಯಾಗಿತ್ತು.ಆದರೆ ಶನಿವಾರ ನುಗ್ಗಿದ ನೀರಿನಿಂದ ಜಮೀನಿನಲ್ಲಿ ನೀರು ನಿಂತು ತೊಗರಿ ಬೆಳೆ ನಾಶವಾಗಿದೆ.ಇದರಿಂದ ರೈತ ಕಂಗಾಲಾಗಿದ್ದಾನೆ. ಈಗಾಗಲೇ ಹೆಸರು ಬೆಳೆಯಲು ಮಾಡಿದ ಸಾಲವನ್ನೇ ತೀರಸಲಾಗದೇ ರೈತ ಮತ್ತೆ ಸಂಕಷ್ಟದಲ್ಲಿ ಸಿಲುಕಿದ್ದಾನೆ.

ಪರಿಹಾರ ನೀಡಲು ಒತ್ತಾಯ : ಸಾವಿರಾರು ಎಕರೆ ಜಮೀನಿನಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈಗಾಗಲೇ ಸಾಲ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.ಕೂಡಲೇ ಜಿಲ್ಲಾಡಳಿತ ರೈತರಿಗೆ ಪರಿಹಾರ ಧನ ನೀಡಬೇಕೆಂದು ರೈತ ಮುಖಂಡ ಬಸವರಾಜ ಕೋರಿ, ಬಿಜೆಪಿ ಮುಖಂಡರಾದ ಬಸವರಾಜ ಮದ್ರಿಕಿ, ಗಿರಿರಾಜ ಪವಾರ, ಜೆಡಿಎಸ್ ಮುಖಂಡ ಲೋಹಿತ್ ಕಟ್ಟಿ ಒತ್ತಾಯಿಸಿದ್ದಾರೆ.

emedia line

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420