ಸುರಪುರ: ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರು ವಿಧಾನಸಭಾ ಅಧೀವೇಶನದಲ್ಲಿ ಭಾಗವಹಿಸಿರುವುದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಮಳೆಯಿಂದ ಏನಾದರು ಸಮಸ್ಯೆಗಳು ಉಂಟಾದಲ್ಲಿ ತಮ್ಮ ಕಾರ್ಯಕರ್ತರಿಗೆ ತಿಳಿಸುವಂತೆ ವಿನಂತಿಸಿಕೊಂಡಿದ್ದರಿಂದ ತಾಲೂಕಿನಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಟೀಂ ರಾಜುಗೌಡ ಸೇವಾ ಸಮಿತಿ ಕಾರ್ಯಕರ್ತರು ಭೇಟಿ ನೀಡಿ ಹಾನಿಯ ಮಾಹಿತಿ ಸಂಗ್ರಹಣೆ ಆರಂಭಿಸಿದರು.
ನಗರದಲ್ಲಿನ ಅನೇಕ ಕಡೆಗಳಿಗೆ ಟೀಂ ರಾಜುಗೌಡ ಸೇವಾ ಸಮಿತಿಯ ಕಾರ್ಯಕರ್ತ ಪರಶುರಾಮ ನಾಟೇಕಾರ ಮತ್ತಿತರರು ಭೇಟಿ ನೀಡಿ ಮಳೆಯಿಂದ ಬಿದ್ದ ಮನೆಗಳ ಮಾಹಿತಿ ಸಂಗ್ರಹ ಮಾಡಿದರು.ನಗರದ ರಂಗಂಪೇಟೆ ದೀವಳಗುಡ್ಡ ತಿಮ್ಮಾಪುರ ಕುಂಬಾರಪೇಟೆ ವೆಂಕಟಾಪುರ ಮೇದಾಗಲ್ಲಿ ಮತ್ತಿತರೆಡೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿ ಶಾಸಕರಿಗೆ ತಿಳಿಸುವ ಕುರಿತು ಭರವಸೆ ನೀಡಿದರು.
ಅದೇರೀತಿಯಾಗಿ ಪೇಠ ಅಮ್ಮಾಪುರ ಭಾಗದಲ್ಲಿ ಮಲ್ಲಿಕಾರ್ಜುನ ರಡ್ಡಿ ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ಪ್ರಕಾಶ ಕುಂಬಾರ ರಾಜನಕೊಳ್ಳೂರ ಭಾಗದಲ್ಲಿ ರೋಹಿತ್ ಪಾಟೀಲ್ ಖಾನಾಪುರ ಎಸ್.ಹೆಚ್ ಭಾಗದಲ್ಲಿ ತಿಗಳಪ್ಪ ಕವಡಿಮಟ್ಟಿ ಅರಕೇರಾ ಜೆ ಭಾಗದಲ್ಲಿ ಕೃಷ್ಣಾರಡ್ಡಿ ಮುದನೂರ ದೇವತ್ಕಲ್ ಭಾಗದಲ್ಲಿ ಸಂತೋಷ ರಡ್ಡಿ ಮಳೆ ಹಾನಿಯ ಕುರಿತು ಮಾಹಿತಿ ಸಂಗ್ರಹಿಸಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…