ಸುರಪುರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ನಗರದ ಹಳೆ ದರಬಾರ ಕಟ್ಟಡದ ಗೋಡೆಗಳು ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿವೆ.
ಬಹು ಸುಂದರವಾದ ಕಟ್ಟಡ ಇದಾಗಿದ್ದು ಗೋಡೆಗಳ ಮೇಲೆ ಮತ್ತು ಕಟ್ಟಡದ ಮೇಲ್ಛಾವಣಿಯ ಮೇಲು ಸುಂದರವಾದ ಕೆತ್ತನೆಗಳಿವೆ,ಈಗ ನಿರಂತವಾಗಿ ಮಳೆ ಸುರಿಯುತ್ತಿರುವುದರಿಂದ ಗೋಡೆಗಳು ಬೀಳುತ್ತಿವೆ.ಅಲ್ಲದೆ ಕಟ್ಟಡದ ಮೇಲ್ಭಾಗದಲ್ಲಿ ಗಿಡಗಳು ಬೇಳೆಯುತ್ತಿರುವುದರಿಂದ ಕಟ್ಟಡಕ್ಕೆ ಮತ್ತಷ್ಟು ಹಾನಿಯಾಗುತ್ತಿದೆ ಎಂದು ಗೃಹ ರಕ್ಷಕ ದಳದ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಿಕಲ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿ,ಸುಮಾರು ಎರಡು ನೂರು ವರ್ಷಗಳಷ್ಟು ಹಳೆಯದಾದ ಕಟ್ಟಡವಿದು.ಸುರರಪು ಸಂಸ್ಥಾನದ ಐತಿಹಾಸಿಕ ಕುರುಹುನಂತಿದೆ.ಸಂಬಂಧಿಸಿದ ಇಲಾಖೆಗಳ ನಿರ್ಲಕ್ಷ್ಯದಿಂದ ಈಗ ಶಿಥಿಲಾವಸ್ಥೆ ತಲುಪಿದೆ.ಈ ಕಟ್ಟಡದ ಮಹಾದ್ವಾರದ ಬಲ ಭಾಗದಲ್ಲಿ ಗೃಹ ರಕ್ಷಕ ದಳದ ಕಚೇರಿ ಹಾಗು ಹಳೆಯ ಪೋಸ್ಟ್ ಆಫೀಸ್ ಇದೆ.ಇವುಗಳು ಈಗ ಮಳೆಯಿಂದ ಹಾನಿಗೊಳಗಾಗಿ ಸೋರುತ್ತಿವೆ.
ಕೂಡಲೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಳೆ ದರಬಾರ ಕಟ್ಟಡದ ರಕ್ಷಣೆಗೆ ಮುಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…