ಸುರಪುರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಅನೇಕ ಗ್ರಾಮಗಳ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.ತಾಲೂಕಿನ ಮಾವಿನಮಟ್ಟಿ ಗ್ರಾಮದ ಕೆರಯ ನೀರು ಗ್ರಾಮದೊಳಗೆ ಹೊಕ್ಕಿದ್ದರಿಂದಾಗಿ ಸುಮಾರು ಹತ್ತಕ್ಕು ಹೆಚ್ಚು ಕುಟುಂಬಗಳು ತುಂಬಾ ತೊಂದರೆ ಅನುಭವಿಸುತ್ತಿವೆ.
ಚಿಕ್ಕ ಚಿಕ್ಕ ಗುಡಿಸಲು ಮನೆಗಳನ್ನು ಮಾಡಿಕೊಂಡಿರುವ ಬಡ ಕುಟುಂಬಗಳು ಮಳೆ ನೀರು ಹೊಕ್ಕು ಮನೆಗಳೆಲ್ಲ ಜಲಾವೃತಗೊಂಡಿದ್ದರಿಂದ ಹಗಲಿರುಳು ಊಟ ನಿದ್ರೆಯಿಲ್ಲದೆ ತೊಂದರೆ ಪಡುವಂತಾಗಿದೆ.ಮನೆಯಲ್ಲಿ ಗರ್ಭೀಣಿ ಮಹಿಳೆಯರಿದ್ದು ಹೆರಿಗೆ ಸಂದರ್ಭದಲ್ಲಿ ಮನೆಯಲ್ಲಿ ನೀರು ಹೊಕ್ಕಿದ್ದರಿಂದ ಕುಟುಂಬಸ್ಥರು ತೀವ್ರ ಆತಂಕಕ್ಕೊಳಗಾಗಿದ್ದಾರೆ.
ಸುದ್ದಿ ತಿಳಿದು ತಹಸೀಲ್ದಾರ ನಿಂಗಣ್ಣ ಬಿರಾದಾರ್ ಅವರು ಕಂದಾಯ ಅಧಿಕಾರಿಗಳಿಗೆ ತಿಳಿಸಿ ಸ್ಥಳಕ್ಕೆ ಭೇಟಿ ನೀಡಿದ್ದರಿಂದಾಗಿ ಮಾವಿನಮಟ್ಟಿಯ ತೊಂದರೆಗೊಳಗಾದ ಕುಟುಂಬಗಳಿಗಾಗಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಉಳಿದುಕೊಳ್ಳಲು ಆಶ್ರಯ ಕಲ್ಪಿಸಿದ್ದಲ್ಲದೆ ಗಂಜಿ ಕೇಂದ್ರವನ್ನು ಆರಂಭಿಸಿ ಜನರ ನೆರವಿಗೆ ಧಾವಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…