ಕಲಬುರಗಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ರವಿವಾರ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ನಗರದ ಐವಾನ್-ಎ-ಶಾಹಿ ಅತಿಥಿಗೃಹದಿಂದ ಕಲಬುರಗಿ ಕೋಟೆ ವರೆಗೆ ಬೆಳಿಗ್ಗೆ ಆಯೋಜಿಸಿದ ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ್ ಎಸ್. ತಳಕೇರಿ ಅವರು ಚಾಲನೆ ನೀಡಿದರು.
ಐವಾನ್-ಎ-ಶಾಹಿ ಯಿಂದ ಕಲಬುರಗಿ ಕೋಟೆ ವರೆಗೆ ನಡೆದ ಸೈಕ್ಲೋಥಾನ್ ನಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳು, ಮಹಿಳೆಯರು, ವಯಸ್ಕರು, ಯುವಕ-ಯುವತಿಯರು ಸೇರಿದಂತೆ ಸುನಾರು 100 ಜನ ಸೈಕ್ಲಿಸ್ಟ್ ಗಳು ಭಾಗವಹಿಸಿದ್ದರು.
ತದನಂತರ ಕೋಟೆಯ ಅವರಣದಲ್ಲಿ ಸ್ವಚ್ಚತಾ ಪಕ್ವಾಡ ಅಭಿಯಾನ ಯೋಜನೆಯಡಿ ಕೋಟೆಯ ಮಸೀದಿ ಅವರಣ ಸ್ವಚ್ಚತಾ ಕಾರ್ಯಕ್ರಮ ಸಹ ನಡೆಯಿತು. ಸುಮಾರು 150 ಜನ ಶ್ರಮದಾನದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್ ಲಾಡಜಿ, ಇಂಟ್ಯಾಕ್ ಸಂಸ್ಥೆಯ ಡಾ.ಶಂಭುಲಿಂಗ ವಾಣಿ, ಕಲಬುರಗಿ ಸೈಕ್ಲಿಂಗ್ ಕ್ಲಬ್ ಸದಸ್ಯರಾದ ವೈಭವ ರೆಡ್ಡಿ, ಡಾ.ಶರಣು ಹತ್ತಿ, ಶಂಭುಲಿಂಗ, ಜೆಸ್ಟ್ ಕ್ಲಬ್ ಮಾಲೀಕ ನಿಜು ಉಪ್ಪಿನ್, ಕಲಬುರಗಿ ಕೋಟೆಯ ಮುತಾವಲಿ ರಿಜ್ವಾನ್ ಉರ್ ರೆಹಮಾನ್ ಸಿದ್ಧಿಕ್ಕಿ, ಪ್ರವಾಸಿ ಸಮಾಲೋಚಕ ಸಂದೀಪ ಸಿಂಗ್ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…