ಶಹಾಬಾದ:ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಹಾಗೂ ಕಲಬುರಗಿ ಮತ್ತು ತೆಲಂಗಾಣ ವಿಭಾಗದ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ರತ್ನಾ ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅನುದಾನಿತ ದೈಹಿಕ ಶಿಕ್ಷಕರ ಸಂಘದ ರಾಜ್ಯ ಚನ್ನಬಸಪ್ಪ ಕೊಲ್ಲೂರ್ ಹೇಳಿದರು.
ಅವರು ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಆಯೋಜಿಸಲಾದ ರಾಜಯೋಗಿನಿ ಬಿ.ಕೆ.ರತ್ನಾ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಅವರು ರಾಷ್ಟ್ರಭಾಷ ಶಿಕ್ಷಣ ಸಮಿತಿಯ ಹಿಂದಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಂತರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೇರಿ ಅಪಾರ ಸೇವೆ ಸಲ್ಲಿಸಿದ್ದರು.ಅವರು ವಿವಿಧ ಭಾಷೆಗಳ ಹಿಡಿತ ಹಾಗೂ ಧಾರ್ಮಿಕ ಬೊಧನೆ ಎಲ್ಲರಿಗೂ ಅಚ್ಚರಿವುಂಟು ಮಾಡುತ್ತಿತ್ತು.ಅವರು ತಮ್ಮ ಜೀವನ ಪರ್ಯಂತ ರಾಜಯೋಗದ ಅಭಿವೃದ್ಧಿಗಾಗಿ ಶ್ರಮಿಸಿದವರು.ಸಾರ್ವಜನಿಕರಿಗೆ ಧಾರ್ಮಿಕ ಬೊಧನೆ ಮೂಲಕ ಸಮಾಜದಲ್ಲಿ ಶಾಂತಿ ಮೂಡಲು ಅವರ ಸೇವೆ ಅನನ್ಯ ಎಂದು ಹೇಳಿದರು.
ಸಿ.ಎ.ಇಂಗಿನಶೆಟ್ಟಿ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯ ಮುಖ್ಯಗುರುಮಾತೆ ದಮಯಂತಿ ಸೂರ್ಯವಂಶಿ,ಮುಖ್ಯಗುರು ಸುಧೀರ ಕುಲಕರ್ಣಿ, ಉಪನ್ಯಾಸಕರಾದ ರಾಜಕುಮಾರ ಬಾಸೂತ್ಕರ್,ರಮೇಶ ವಾಲಿ, ಪ್ರಕಾಶ ಕೋಸಗಿಕರ್, ಪದ್ಮಶ್ರೀ ಜೋಷಿ,ಸಾಬಣ್ಣ ಗುಡ್ಲಾ, ಶರಣಪ್ಪ ಹಲಕರ್ಟಿ, ಸೌರಭ ವ್ಯಾಸ,ಶಿಕ್ಷಕರಾದ ಬಾಬಾ ಸಾಹೇಬ ಸಾಳುಂಕೆ,ಚನ್ನಬಸಪ್ಪ ಕೊಲ್ಲೂರ,ಮಹೇಶ್ವರಿ ಗುಳಿಗಿ,ವಸಂತ ಪಾಟೀಲ, ಅನೀಲಕುಮಾರ ಕುಲಕರ್ಣಿ,ಜಗದೇವಿ ಅಗಸ್ಥ್ಯತೀರ್ಥ,ಶಿರೋಮಣಿ ದಯಾಲ,ಮೀನಾಕ್ಷಿ, ವೀರಯ್ಯ ಹಿರೇಮಠ , ಸೂಗಯ್ಯ ಘಂಟಿಮಠ, ಶ್ರೀರಾಮ ಚವ್ಹಾಣ ಇತರರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…