ರಾಯಚೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈಧ್ಯಕೀಯ ಶಿಕ್ಷಣ ಗುತ್ತಿಗೆ ನೌಕರರ ನ್ಯಾಯಯುತ ಬೇಡಿಕೆಗಳು ಈಡೇರಿಸಬೇಕೆಂದು ನೌಕರರ ಜಿಲ್ಲಾಧ್ಯಕ್ಷ ನಾಗರಾಜ ವರ್ಮ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರೋನಾ ವೈರಸ್ ಹಾವಳಿ ಸಂದರ್ಭದಲ್ಲಿ ಪ್ರಾಣವನ್ನು ಪರ್ಪಣಕ್ಕಿಟ್ಟು ಕೆಲಸ ಮಾಡಿದ ನೌಕರರು. ಇದೀಗ ಬೇಡಿಕೆಗಳನ್ನು ಈಡೇರಿಸು ವಂತೆ ಕಳೆದ ವಾರದಿಂದ ಹೋರಾಟ ಮಾಡು ತ್ತಿದ್ದು ಸರ್ಕಾರ ಸ್ಪಂದಿಸದೇ ಇರುವುದನ್ನು ಖಂಡಿಸಿದರು.
ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಿ ಅದಕ್ಕೆ ಅಗತ್ಯವಿರುವ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರವು ನೀಡಬೇ ಕಾಗಿದೆ.ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿ ಸಬೇಕು, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರ ರಿಗೆ ಸೇವಾ ಭದ್ರತಿಯನ್ನು ನೀಡಿ ಅವ ರನ್ನು ಖಾಯಂಗೊಳಿಸಬೇಕು ಎಂದು ಹೇಳಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ನಿಡಬೇಕು ಎಂದು ಸಾಕಷ್ಟು ಬಾರಿ ಮನವಿ ಮಾಡಿದೆ ಆದರೆ ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ, ಎಲ್ಲಾ ನೌಕರರು ಗುತ್ತಿಗೆದಾರರ ಮಧ್ಯವರ್ತಿತನವಿಲ್ಲದೇ ನೇರವಾಗಿ ಇಪಿಯಿಂದಲೇ ವೇತನ ಪಾವತಿ ಮಾಡಬೇಕು ಮತ್ತು ಒಳಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಿಗುವ ಸೌಲಭ್ಯಗಳು ಹೊರಗುತ್ತಿಗೆ ನೌಕರರಿಗೂ ಸಿಗಬೇಕಾಗಿದೆ ಎಂದರು.
ಸಣ್ಣ ಪುಟ್ಟ ನೆಪವೊಡ್ಡಿ ನೌಕರರನ್ನು ಕೆಲಸದಿಂದ ತೆಗೆಯುತ್ತಿದ್ದಾರೆ.ಅಂತಹ ಅನಾಗರಿಕ ಪದ್ಧತಿಯನ್ನ ಕೈಬಿಡಬೇಕು.ಕಳೆದ ವರ್ಷಗಳಲ್ಲಿ ಹೆಚ್ಚಿಸಿದ ವೇತನವನ್ನು ಹಿಂಪಡೆಯಬಾರದು ಮತ್ತು ಪ್ರತ್ಯೇಕವಾಗಿ ಶೇಕಡ 30 % ರಾಜ್ಯ / ಕೇಂದ್ರ ಸರ್ಕಾರದ ಮೂಲಕ ಹೆಚ್ಚುವರಿಯಾಗಿ ನೀಡಬೇಕು, ಕೆಲಸದ ಸ್ಥಳದಲ್ಲಿ ಗುತ್ತಿಗೆ ನೌಕರರಿಗೆ ಮಾಡುವ ಶೋಷಣೆಯನ್ನು ತಡೆಗಟ್ಟಬೇಕಾಗಿದೆ ಎಂದು ಹೇಳಿದರು.
ತುರ್ತು ಘಟಕಗಳಲ್ಲಿ, ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಯಲ್ಲಿ ಇರುವವರು , ಗ್ರಾಮೀಣ ಸೇವೆ ಸಲ್ಲಿಸುತ್ತಿರುವವರಿಗೆ , ಟಿ.ಬಿ,ಎಚ್.ಐ.ವಿ ಮಾರಕ ರೋಗಗಳ ನಿಯಂತ್ರಣ ಸೇವೆಯಲ್ಲಿ ರುವವರು, ಅಂಬುಲೆನ್ಸ್ ವಾಹನ ಚಾಲಕರಿಗೆ, ಎಲ್ಲಾ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗು ಗ್ರೂಪ್ ಡಿ ನೌಕರರುಗಳಿಗೆ ವಿಶೇಷ ಸೇವಾ ಭತ್ಯೆ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷೆ ಸಂಧ್ಯಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ, ಜಂಟಿ ಕಾರ್ಯದರ್ಶಿ ವಿವೇಕ, ಖಜಾಂಚಿ ವೆಂಕೋಬ ನಾಯಕ, ಸಂಘಟನಾ ಕಾರ್ಯದರ್ಶಿ ಅಬ್ದುಲ್ ನಬಿ, ಮುಖಂಡರಾದ ಕೃಷ್ಣ, ಅಮರೇಶ, ಜಮೀಲ್, ಕೃಷ್ಣವೇಣಿ, ಸಿದ್ಧರಾಜು,ಪ್ರೇಮ ಪಾಟೀಲ್, ರವಿಶಂಕರ ಶುಕ್ಲಾ, ಗ್ಲಾಡಿ, ಓಂಕಾರ್ ಜಾಂಶಿಕರ್, ಪ್ರಿಯಾಂಕ, ರಾಮ್ ಪ್ರಸಾದ್, ರವಿ ಕುಮಾರ್ ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…