ರಾಜ್ಯದ ಮುಖ್ಯಮಂತ್ರಿಯ ಪುತ್ರನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದಕ್ಕಾಗಿ ಕನ್ನಡದ ಸುದ್ದಿ ವಾಹಿನಿ ಬಂದ್ ಮಾಡಿಸಿರುವುದು ಖಂಡನಿಯವಾಗಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಮಾಧ್ಯಮವನ್ನು ನಾಲ್ಕನೇ ಅಂಗ ಎಂದು ಕರೆಯುತ್ತಾರೆ. ದೇಶದಲ್ಲಿನ ಯಾವುದೆ ಸಮಸ್ಯೆ ಭ್ರಷ್ಟಾಚಾರದ ವರದಿ ಮಾಡುವ ಹಕ್ಕು ಮಾಧ್ಯಮ ಹೂಂದಿದೆ ಸಂವಿಧಾನವು ಹಕ್ಕು ಕೋಟಿದೆ ಸಮಾಜಕ್ಕೆ ಮಾಧ್ಯಮವೇನುವುದು ಕನ್ನಡಿಯಾಗಿ ತಪ್ಪು, ಸರಿ ತೋರಿಸುವ ಹಕ್ಕು ಮಾಧ್ಯಮಗಳಿಗೆ ಇದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳನ್ನು ಟೀಕಿಸುವ ಪತ್ರಕರ್ತರ ವಿರುದ್ದ ಮೊಕದ್ದಮೆ ದಾಖಲಿಸುವುದು ಹೆಚ್ಚುತ್ತಿದೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ದ ಬರೆಯುವವರನ್ನು ಜೈಲಿಗಟ್ಟುವ ಕೆಟ್ಟ ಪದ್ದತಿ ರಾಜ್ಯದಲ್ಲಿ ಆರಂಭವಾಗಿದೆ.
ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಅವುಗಳ ಸ್ವಾತಂತ್ರ್ಯಹರಣ ಮಾಡಿದರೆ, ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದಂತೆ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆದುಕೊಂಡಂತೆ. ಭ್ರಷ್ಟಾಚಾರದ ವಿರುದ್ದ ಹೋರಾಡುವ ಮಾದ್ಯಮಗಳಿಗೆ ಪ್ರಶಂಸೆಗಳು ವ್ಯಕ್ತವಾಗಿ, ಸಹಕಾರ ಸಿಗಬೇಕು, ಹೋರತು ಸರ್ಕಾರವೆ ಮಾಧ್ಯಮಗಳ ವಿರುದ್ದ ನಿಂತು ದುರಾಡಳಿತ ನಡೆಸುವುದು ಸರಿಯಲ್ಲ.
ಯಾರೆ ತಪ್ಪು ಮಾಡಲಿ ಶಿಕ್ಷೆಯಾಗಬೇಕು ಕಾನೂನಿನಲ್ಲಿ ಎಲ್ಲರೂ ಸಮಾನರು ಎಂದು ಸಂವಿಧಾನ ಹೇಳುತ್ತದೆ ಆದರೆ ನೈಜ್ಯವಾಗಿ ಅನ್ಯಾಯದ ವಿರುದ್ದ ಹೋರಾಡುವರಿಗೆ ಸಾವು ಕಟ್ಟಿಟ ಬುತ್ತಿಯಂತೆ ಆಗಿದೆ. ಪ್ರಭಾವಿಗಳಿಗೊಂದು ನ್ಯಾಯ ಸಾಮಾನ್ಯರಿಗೊಂದು ಎಂಬಂತೆ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗುತ್ತಿದೆ.
ಪ್ರಭಾವಿ ವ್ಯಕ್ತಿಗಳು ಇದ್ದರು ಅಥವಾ ಸರ್ಕಾರವೆ ನಡೆಸಿದರು ನ್ಯಾಯಯುತ ಸಮಗ್ರ ಸರ್ಕಾರವೆ ತನಿಖೆಗೆ ಒಳಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕಿದೆ. ಆದರೆ ಇನ್ನಾದರು ಅನ್ಯಾದ ವಿರುದ್ದ ಹೋರಾಡುವರಿಗೆ ಬೇದರಿಕೆ, ಮಾಧ್ಯಮಗಳು ಬ್ಯಾನ್ ಮಾಡಿಸುವುದು ಇಂತಹ ಘಟನೆಗಳು ಮುಂದೆ ನಡಿಯದಂತೆ ನೋಡಿಕೋಳಬೇಕಿದೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…