ಬಿಸಿ ಬಿಸಿ ಸುದ್ದಿ

ವಿಕಲಚೇತನರ ಪ್ರಮಾಣ ಪತ್ರ ನೀಡಲು ಹಣ ಪಡಯುತ್ತಿರುವ ಅಧಿಕಾರಗಳ ಕ್ರಮಕ್ಕೆ ಆಗ್ರಹ

ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿ ವಿಕಲಚೇತನರಿಗೆ ವಿಕಲಚೇತನರ ಕೊಠಡಿಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಲು ವಿಕಲಚೇತನರ ಚುನರ್ವಸತಿ ಕೇಂದ್ರದ ಅಧಿಕಾರಿಗಳು ಹಣ ಪಡೆಯುತ್ತಿದ್ದು ಅವರ ಮೆಲೆ ಕ್ರಮ ಕೈಗೊಳ್ಳಬೇಕು ಎಂದು ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ನೀಡಿ ನಗರದ ರಿಮ್ಸ್ ಆಸ್ಪತ್ರೆಯ ವಿಕಲಚೇತನರ ಮನರ್ವಸತಿ ಕೇಂದ್ರದ ಕೊಠಡಿಯಲ್ಲಿ ಕಾರ್ಯನಿರ್ವಹಿ ಸುತ್ತಿರುವ ಕಂಪ್ಯೂಟರ್ ಆಪರೇಟರ್ ಎಂ.ಡಿ. ರಫಿ ಮತ್ತು ನೋಡಲ್ ಅಧಿಕಾರಿ ಹನುಮಂತು ಹಾಗೂ ಆನಂದ, ಚಂದು ಇವರು ವಿಕಲಚೇತನರ ವೈದ್ಯಕೀಯ ಪ್ರಮಾಣ ಪತ್ರ ನೀಡಲು ವಿಕಲ ಚೇತನರ ಬಳಿ ಹಣವನ್ನು ಪಡೆದುಕೊಂಡು ಪ್ರಮಾಣ ಪತ್ರಗಳು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳು ಹಣ ಪಡೆದು ಯಾವುದೇ ರಸೀದಿ ನೀಡುವುದಿಲ್ಲ, ಪ್ರಮಾಣ ಪತ್ರಗಳು ನೀಡಲು ಯಾವುದೇ ಶುಲ್ಕ ತೆಗೆದುಕೊಳ್ಳಲು ಸರ್ಕಾರದ ಆದೇಶವಿದೆ.ಆದರೆ ಅಲ್ಲಿನ ಅಧಿಕಾರಿಗಳು ವೈದ್ಯ ಕೀಯ ಅಧೀಕ್ಷಕರು 200 ರೂ. ಹಣ ಪಡೆದು ಪ್ರಮಾಣ ಪತ್ರ ನೀಡಬೇಕು ಎಂದು ಹೇಳಿದ್ದಾರೆ. ಇದೇ ರೀತಿ ಸುಮಾರು ಜಿಲ್ಲೆಯಾ ದ್ಯಾದಂತ 10 ಸಾವಿರ ವಿಕಲಚೇತನರ ಪ್ರಮಾಣ ಪತ್ರ ನೀಡಿರು ತ್ತಾರೆ ಎಂದರು.

ವಿಕಲಚೇತನ ಪ್ರಮಾಣ ಪತ್ರಗಳನ್ನು ಸುಮಾರು 13 ತಿಂಗಳಿಂದ ನೀಡುತ್ತಿದ್ದಾರೆ.ಆನಂದ ಮತ್ತು ಚಂದ್ರು ಡಿ.ಡಿ.ಆರ್.ಸಿ.ಯಲ್ಲಿ ಕೆಲಸ ಮಾಡು ತ್ತಿದ್ದು ಇವರು ವಿಕಲಚೇತನ ಕೊಠಡಿಯಲ್ಲಿ ವಿಕಲಚೇತನರಿಂದ 200 ರೂ.ತೆಗೆದುಕೊಂಡು ಪ್ರಮಾಣ ನೀಡುತ್ತಿದ್ದಾರೆ.

ನೋಡಲ್ ಅಧಿಕಾರಿಗಳು ವಾರಕ್ಕೊಮ್ಮೆ ಬರುತ್ತಿದ್ದಾರೆ.ಇಲ್ಲಿ ಕೇಳುವವರು ಯಾರು ಇಲ್ಲತಾಗಿದೆ.ಕೆಲವು ವಿಕಲಚೇತನರಿಗೆ ಡಾಕ್ಟರ್‌ಗಳು ಓಪಿಡಿ ರಸೀದಿ ನೀಡಿರುವುದಿಲ್ಲ, ಅಂತಹ ವಿಕಲಚೇತನರಿಗೂ ಸಹ ಈ ಸಿಬ್ಬಂದಿಗಳು ಹಣವನ್ನು ಪಡೆದುಕೊಂಡು ಪ್ರಮಾಣ ಪತ್ರಗಳನ್ನು ನೀಡುತ್ತಿದ್ದಾರೆ, ಪಾಸವರ್ಡ ಕೊಟ್ಟವರು ಯಾರು ಎಂದು ಇದುವರೆಗೆ ಯಾರೂ ಹೇಳುತ್ತಿಲ್ಲ ಅಧಿಕಾರಿಗಳು ದುರ್ಭಳಕೆ ಮಾಡಿಕೊಳ್ಳುತ್ತಾರೆ ಎಂದರು.

ಈ ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಕೊಠಡಿಯಲ್ಲಿ ನೋಡಲ್ ಅಧಿಕಾರಿಗಳ ಇರುವಂತೆ ನೋಡಿಕೊಳ್ಳಬೇಕು, ಇಲಾಖೆಯ ಲಾಗ್ ಇನ್ ಪಾಸ್ ವರ್ಡ್ ದುರ್ಭಳೆಯಾಗುತ್ತಿದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಮಹಮದ್ ಅಹ್ಮದ್ ರಫಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago