ಕಲಬುರಗಿ: ತೊಗರಿಬೆಳೆಯಲ್ಲಿ ಗಾಂಜಾ ಬೆಳೆ ಬೆಳೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ಚಿತ್ತಾಪುರ ಪೊಲೀಸ್ ಠಾಣೆ ಪೊಲೀಸರು ಎರಡು ದಿನ ಸತತ ಕಾರ್ಯಚರಣೆ ನಡೆಸಿ 410 ಕೆ,ಜೆ ತೂಕದ ಹಸಿ ಗಾಂಜಾ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ ಇದೇ ಗ್ರಾಮದ ಇದೇ ಗ್ರಾಮದ ನಿವಾಸಿಯಾದ ಹಣಮಂತ ಮಲ್ಲಪ್ಪ ಕಟ್ಟಿ ಹಾಗೂ ಭೀಮರಾಯ ಕಟ್ಟಿ. ಗಾಂಜಾ ಬೆಳೆದ ಇಬ್ಬರು ಆರೋಪಿಗಳು.
ಹೊಲದ ತೊಗರಿಬೆಳೆ ನಡುವೆ ಗಾಂಜಾ ಬೆಳೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ಚಿತ್ತಾಪುರು ಪೊಲೀಸ್ ಡಿವೈಎಸ್ಪಿ, ಬಿ.ಎನ್ ಪಾಟೀಲ್, ಸಿಪಿಐ ಕೃಷ್ಣಪ್ಪ ಕಲಾದೇವರು, ಪಿ.ಎಸ್.ಐ ಶ್ರೀಶೈಲ್ ಅಂಬಾಜಿ ಎ.ಎಸ್.ಐ ಚಂದ್ರಮಪ್ಪ, ಸಿಬ್ಬಂದಿಗಳಾದ ಮಹೇಶ್ ರೆಡ್ಡಿ, ಮಲ್ಲೇಶಿ, ಶೀವಯ್ಯ ಸ್ವಾಮಿ, ಅಯ್ಯಣ್ಣ, ಬಲವಂತರೆಡ್ಡಿ ಸೇರಿದಂತೆ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತೆಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…