ಕಲಬುರಗಿ: ಕಳೆದ 20-25 ದಿನಗಳಿಂದ ಕಲಬುರಗಿ ಜಿಲ್ಲೆಯ ವಿವಿಧೆಡೆ ಪೊಲೀಸರು ದಾಳಿ ನಡೆಸಿ, ಅಕ್ರಮ ಗಾಂಜಾ ಅಡ್ಡೆಗಳನ್ನು ಬಯಲಿಗೆಳೆದು ಆರೋಪಿಗಳನ್ನು ಬಂಧಿಸುತ್ತಿರುವುದು ಸಂತಸದ ವಿಚಾರ. ಆದರೆ, ಇಷ್ಟೊಂದು ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗುತ್ತಿರುವುದನ್ನು ನೋಡಿದರೆ, ನಮ್ಮ ಜಿಲ್ಲೆಯು ಮಾದಕ ವಸ್ತುಗಳ ಕೇಂದ್ರ ತಾಣವಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕುರಿತು ಬರೆದುಕೊಂಡಿರು ಶಾಸಕ ಮಾದಕ ವ್ಯಸನ ಎಂಬುದು ಇಡೀ ಜಗತ್ತನ್ನೇ ಆವರಿಸಿರುವ ಒಂದು ಪಿಡುಗು. ಈ ಪಿಡುಗು ಇತ್ತೀಚೆಗೆ ನಮ್ಮ ಜಿಲ್ಲೆಯಲ್ಲೂ ವ್ಯಾಪಕವಾಗಿ ಹಬ್ಬಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಮಾದಕ ದ್ರವ್ಯ ಚಟಕ್ಕೆ ಬಲಿಯಾಗುವವರಲ್ಲಿ ಕಾಲೇಜು ವಿದ್ಯಾರ್ಥಿಗಳೇ ಅಧಿಕ. ಈ ವ್ಯಸನಗಳಿಗೆ ದಾಸರಾಗುವುದೆಂದರೆ ಹಣ ಕೊಟ್ಟು ರೋಗಗಳನ್ನು ಕೊಂಡುಕೊಂಡಂತೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಜಿಲ್ಲೆಯ ವಿದ್ಯಾರ್ಥಿಗಳು ಜಾಗೂರಕರಾಗಿಬೇಕೆಂದು ಮನವಿ ಮಾಡಿದ ಅವರು, ಮೋಜಿನ ಹೆಸರಲ್ಲಿ ಕ್ಷಣಿಕ ತೃಪ್ತಿಗಾಗಿ ದುಶ್ಚಟಗಳಿಗೆ ಬಲಿಯಾಗಿ, ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ ಅವರು ದೇಶದ ಭವಿಷ್ಯದ ಬೆಳಕಾಗಿರುವ ಯುವಕರು, ಇಲ್ಲಸಲ್ಲದ ಚಟಗಳಿಗೆ ಬಲಿಯಾಗುವುದಕ್ಕಿಂತ ಮುಂಚೆ ತಮ್ಮ ಕನಸುಗಳು, ತಂದೆ – ತಾಯಿ ತಮ್ಮ ಮೇಲಿಟ್ಟಿರುವ ಭರವಸೆ, ತಮ್ಮ ಗುರಿಯತ್ತ ಒಮ್ಮೆ ತಿರುಗಿ ನೋಡಬೇಕು ಎಂದು ಕೀವಿ ಮಾತು ಹೇಳಿದ್ದಾರೆ.
ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಡ್ರಗ್ಸ್ನಂತಹ ಪಿಡುಗುಗಳ ಸಮಾಧಿಯ ಮೇಲೆ ಸದೃಢ ಭಾರತವನ್ನು ಕಟ್ಟಬೇಕಾದ ಜವಾಬ್ದಾರಿ ನಮ್ಮ ಯುವಕರ ಹೆಗಲ ಮೇಲಿದ್ದು, ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡುಚ ಪಣ ತೊಡಬೇಕೆಂದು ಜಿಲ್ಲೆಯ ಯುವ ಜನತೆಗೆ ಕರೆ ನೀಡಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…